ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ? ವಿಚಿತ್ರವನ್ನು ನೋಡಿದರೆ ನಿಮಗೆ ಇಂತಹದೊಂದು ಅನುಮಾನ ಬಾರದೆ ಇರದು. ಇಂಥ ಸನ್ನಿವೇಶ ನಿರ್ಮಾಣವಾಗಿರುವುದು ದೂರದಲ್ಲೆಲ್ಲೋ ಅಲ್ಲ, ಮೈಸೂರಿನಿಂದ 20 ಕಿಲೋಮೀಟರ್ ದೂರವಿರುವ ಗೋಪಾಲಪುರ ಗ್ರಾಮದಲ್ಲಿ.
ಜಯಪುರ ಹೋಬಳಿಗೆ ಸೇರಿದ ಗೋಪಾಲಪುರ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣ ಜಲಾವೃತಗೊಂಡು ದಿನಗಳು ಉರುಳುತ್ತಿವೆ. ಶಿಕ್ಷಕರು ಮತ್ತು ಮಕ್ಕಳು ಓಡಾಡಲು ಪರದಾಟವಾಗಿದ್ದು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಪಕ್ಕದಲ್ಲಿರುವ ಮುಳ್ಳೂರು ಕೆರೆ ಕೋಡಿ ಹರಿದು ನೀರು ಹರಿದು ಜಲಾವೃತಗೊಂಡು 20 ದಿನಗಳು ಕಳೆಯುತ್ತಿವೆ. ಈಗಾಗಲೇ ಅಧಿಕಾರಿಗಳಿಗೆ ಅವ್ಯವಸ್ಥೆ ಸಂಬಂಧ ದೂರು ನೀಡಲಾಗಿದೆ ಆದರೆ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಶಿಕ್ಷಣ ಇಲಾಖೆ ಅಧಿಕಾರಿಗಳಾಗಲಿ ಈ ಬಗ್ಗೆ ನಿರ್ಲಕ್ಷ ವಹಿಸಿರುವುದು ಗ್ರಾಮಸ್ಥರ ಕಣ್ಣು ಕೆಂಪಾಗುವಂತೆ ಮಾಡಿದೆ ಶಾಲೆಯ ಮುಂಭಾಗದ ಆವರಣದ ಜಾಗದಲ್ಲಿ ಸಂಪೂರ್ಣ ನೀರು ನಿಂತಿರುವ ಹಿನ್ನೆಲೆಯಲ್ಲಿ ಓಡಾಡಲು ಸ್ಥಳವಿಲ್ಲದಂತಾಗಿದೆ. ಇದರಿಂದ ಶಾಲೆಯ ಹಿಂಭಾಗದಲ್ಲಿನ ಕಿರಿದಾದ ಜಾಗದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆ ಪ್ರವೇಶಿಸುತ್ತಿದ್ದಾರೆ. ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ನೀರು ತುಂಬಿದ ನಂತರ ಮಕ್ಕಳು ಶಾಲೆಗೆ ಹಾಜರಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ಶೌಚಾಲಯಕ್ಕೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಶಾಲೆಯ ಆವರಣದಲ್ಲಿ ನೀರು ನಿಂತು ಮಕ್ಕಳಿಗೆ ತೊಂದರೆಯಾಗುತ್ತಿರುವ ಕುರಿತು ಗ್ರಾಮಸ್ಥರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ.ಈ ಬಗ್ಗೆ ಯಾವುದೇ ಅಗತ್ಯ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…