ಜಿಲ್ಲೆಗಳು

ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ?

ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ? ವಿಚಿತ್ರವನ್ನು ನೋಡಿದರೆ ನಿಮಗೆ ಇಂತಹದೊಂದು ಅನುಮಾನ ಬಾರದೆ ಇರದು. ಇಂಥ ಸನ್ನಿವೇಶ ನಿರ್ಮಾಣವಾಗಿರುವುದು ದೂರದಲ್ಲೆಲ್ಲೋ ಅಲ್ಲ, ಮೈಸೂರಿನಿಂದ 20 ಕಿಲೋಮೀಟರ್ ದೂರವಿರುವ ಗೋಪಾಲಪುರ ಗ್ರಾಮದಲ್ಲಿ.

ಜಯಪುರ ಹೋಬಳಿಗೆ ಸೇರಿದ ಗೋಪಾಲಪುರ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣ ಜಲಾವೃತಗೊಂಡು ದಿನಗಳು ಉರುಳುತ್ತಿವೆ. ಶಿಕ್ಷಕರು ಮತ್ತು ಮಕ್ಕಳು ಓಡಾಡಲು ಪರದಾಟವಾಗಿದ್ದು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಪಕ್ಕದಲ್ಲಿರುವ ಮುಳ್ಳೂರು ಕೆರೆ ಕೋಡಿ ಹರಿದು ನೀರು ಹರಿದು ಜಲಾವೃತಗೊಂಡು 20 ದಿನಗಳು ಕಳೆಯುತ್ತಿವೆ. ಈಗಾಗಲೇ ಅಧಿಕಾರಿಗಳಿಗೆ ಅವ್ಯವಸ್ಥೆ ಸಂಬಂಧ ದೂರು ನೀಡಲಾಗಿದೆ ಆದರೆ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಶಿಕ್ಷಣ ಇಲಾಖೆ ಅಧಿಕಾರಿಗಳಾಗಲಿ ಈ ಬಗ್ಗೆ ನಿರ್ಲಕ್ಷ ವಹಿಸಿರುವುದು ಗ್ರಾಮಸ್ಥರ ಕಣ್ಣು ಕೆಂಪಾಗುವಂತೆ ಮಾಡಿದೆ ಶಾಲೆಯ ಮುಂಭಾಗದ ಆವರಣದ ಜಾಗದಲ್ಲಿ ಸಂಪೂರ್ಣ ನೀರು ನಿಂತಿರುವ ಹಿನ್ನೆಲೆಯಲ್ಲಿ ಓಡಾಡಲು ಸ್ಥಳವಿಲ್ಲದಂತಾಗಿದೆ. ಇದರಿಂದ ಶಾಲೆಯ ಹಿಂಭಾಗದಲ್ಲಿನ ಕಿರಿದಾದ ಜಾಗದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆ ಪ್ರವೇಶಿಸುತ್ತಿದ್ದಾರೆ. ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ನೀರು ತುಂಬಿದ ನಂತರ ಮಕ್ಕಳು ಶಾಲೆಗೆ ಹಾಜರಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ಶೌಚಾಲಯಕ್ಕೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಶಾಲೆಯ ಆವರಣದಲ್ಲಿ ನೀರು ನಿಂತು ಮಕ್ಕಳಿಗೆ ತೊಂದರೆಯಾಗುತ್ತಿರುವ ಕುರಿತು ಗ್ರಾಮಸ್ಥರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ.ಈ ಬಗ್ಗೆ ಯಾವುದೇ ಅಗತ್ಯ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

1 hour ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

2 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

3 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

4 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

5 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

5 hours ago