ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ? ವಿಚಿತ್ರವನ್ನು ನೋಡಿದರೆ ನಿಮಗೆ ಇಂತಹದೊಂದು ಅನುಮಾನ ಬಾರದೆ ಇರದು. ಇಂಥ ಸನ್ನಿವೇಶ ನಿರ್ಮಾಣವಾಗಿರುವುದು ದೂರದಲ್ಲೆಲ್ಲೋ ಅಲ್ಲ, ಮೈಸೂರಿನಿಂದ 20 ಕಿಲೋಮೀಟರ್ ದೂರವಿರುವ ಗೋಪಾಲಪುರ ಗ್ರಾಮದಲ್ಲಿ.
ಜಯಪುರ ಹೋಬಳಿಗೆ ಸೇರಿದ ಗೋಪಾಲಪುರ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣ ಜಲಾವೃತಗೊಂಡು ದಿನಗಳು ಉರುಳುತ್ತಿವೆ. ಶಿಕ್ಷಕರು ಮತ್ತು ಮಕ್ಕಳು ಓಡಾಡಲು ಪರದಾಟವಾಗಿದ್ದು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಪಕ್ಕದಲ್ಲಿರುವ ಮುಳ್ಳೂರು ಕೆರೆ ಕೋಡಿ ಹರಿದು ನೀರು ಹರಿದು ಜಲಾವೃತಗೊಂಡು 20 ದಿನಗಳು ಕಳೆಯುತ್ತಿವೆ. ಈಗಾಗಲೇ ಅಧಿಕಾರಿಗಳಿಗೆ ಅವ್ಯವಸ್ಥೆ ಸಂಬಂಧ ದೂರು ನೀಡಲಾಗಿದೆ ಆದರೆ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಶಿಕ್ಷಣ ಇಲಾಖೆ ಅಧಿಕಾರಿಗಳಾಗಲಿ ಈ ಬಗ್ಗೆ ನಿರ್ಲಕ್ಷ ವಹಿಸಿರುವುದು ಗ್ರಾಮಸ್ಥರ ಕಣ್ಣು ಕೆಂಪಾಗುವಂತೆ ಮಾಡಿದೆ ಶಾಲೆಯ ಮುಂಭಾಗದ ಆವರಣದ ಜಾಗದಲ್ಲಿ ಸಂಪೂರ್ಣ ನೀರು ನಿಂತಿರುವ ಹಿನ್ನೆಲೆಯಲ್ಲಿ ಓಡಾಡಲು ಸ್ಥಳವಿಲ್ಲದಂತಾಗಿದೆ. ಇದರಿಂದ ಶಾಲೆಯ ಹಿಂಭಾಗದಲ್ಲಿನ ಕಿರಿದಾದ ಜಾಗದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆ ಪ್ರವೇಶಿಸುತ್ತಿದ್ದಾರೆ. ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ನೀರು ತುಂಬಿದ ನಂತರ ಮಕ್ಕಳು ಶಾಲೆಗೆ ಹಾಜರಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ಶೌಚಾಲಯಕ್ಕೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಶಾಲೆಯ ಆವರಣದಲ್ಲಿ ನೀರು ನಿಂತು ಮಕ್ಕಳಿಗೆ ತೊಂದರೆಯಾಗುತ್ತಿರುವ ಕುರಿತು ಗ್ರಾಮಸ್ಥರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ.ಈ ಬಗ್ಗೆ ಯಾವುದೇ ಅಗತ್ಯ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ಬಿಡದಿ : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…