ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ? ವಿಚಿತ್ರವನ್ನು ನೋಡಿದರೆ ನಿಮಗೆ ಇಂತಹದೊಂದು ಅನುಮಾನ ಬಾರದೆ ಇರದು. ಇಂಥ ಸನ್ನಿವೇಶ ನಿರ್ಮಾಣವಾಗಿರುವುದು ದೂರದಲ್ಲೆಲ್ಲೋ ಅಲ್ಲ, ಮೈಸೂರಿನಿಂದ 20 ಕಿಲೋಮೀಟರ್ ದೂರವಿರುವ ಗೋಪಾಲಪುರ ಗ್ರಾಮದಲ್ಲಿ.
ಜಯಪುರ ಹೋಬಳಿಗೆ ಸೇರಿದ ಗೋಪಾಲಪುರ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣ ಜಲಾವೃತಗೊಂಡು ದಿನಗಳು ಉರುಳುತ್ತಿವೆ. ಶಿಕ್ಷಕರು ಮತ್ತು ಮಕ್ಕಳು ಓಡಾಡಲು ಪರದಾಟವಾಗಿದ್ದು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಪಕ್ಕದಲ್ಲಿರುವ ಮುಳ್ಳೂರು ಕೆರೆ ಕೋಡಿ ಹರಿದು ನೀರು ಹರಿದು ಜಲಾವೃತಗೊಂಡು 20 ದಿನಗಳು ಕಳೆಯುತ್ತಿವೆ. ಈಗಾಗಲೇ ಅಧಿಕಾರಿಗಳಿಗೆ ಅವ್ಯವಸ್ಥೆ ಸಂಬಂಧ ದೂರು ನೀಡಲಾಗಿದೆ ಆದರೆ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಶಿಕ್ಷಣ ಇಲಾಖೆ ಅಧಿಕಾರಿಗಳಾಗಲಿ ಈ ಬಗ್ಗೆ ನಿರ್ಲಕ್ಷ ವಹಿಸಿರುವುದು ಗ್ರಾಮಸ್ಥರ ಕಣ್ಣು ಕೆಂಪಾಗುವಂತೆ ಮಾಡಿದೆ ಶಾಲೆಯ ಮುಂಭಾಗದ ಆವರಣದ ಜಾಗದಲ್ಲಿ ಸಂಪೂರ್ಣ ನೀರು ನಿಂತಿರುವ ಹಿನ್ನೆಲೆಯಲ್ಲಿ ಓಡಾಡಲು ಸ್ಥಳವಿಲ್ಲದಂತಾಗಿದೆ. ಇದರಿಂದ ಶಾಲೆಯ ಹಿಂಭಾಗದಲ್ಲಿನ ಕಿರಿದಾದ ಜಾಗದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆ ಪ್ರವೇಶಿಸುತ್ತಿದ್ದಾರೆ. ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ನೀರು ತುಂಬಿದ ನಂತರ ಮಕ್ಕಳು ಶಾಲೆಗೆ ಹಾಜರಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ಶೌಚಾಲಯಕ್ಕೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಶಾಲೆಯ ಆವರಣದಲ್ಲಿ ನೀರು ನಿಂತು ಮಕ್ಕಳಿಗೆ ತೊಂದರೆಯಾಗುತ್ತಿರುವ ಕುರಿತು ಗ್ರಾಮಸ್ಥರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ.ಈ ಬಗ್ಗೆ ಯಾವುದೇ ಅಗತ್ಯ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…