ಮೈಸೂರು : ಶಾಲೆಯೊಳು ಕೆರೆಯೋ, ಕೆರೆಯೊಳು ಶಾಲೆಯೋ? ವಿಚಿತ್ರವನ್ನು ನೋಡಿದರೆ ನಿಮಗೆ ಇಂತಹದೊಂದು ಅನುಮಾನ ಬಾರದೆ ಇರದು. ಇಂಥ ಸನ್ನಿವೇಶ ನಿರ್ಮಾಣವಾಗಿರುವುದು ದೂರದಲ್ಲೆಲ್ಲೋ ಅಲ್ಲ, ಮೈಸೂರಿನಿಂದ 20 ಕಿಲೋಮೀಟರ್ ದೂರವಿರುವ ಗೋಪಾಲಪುರ ಗ್ರಾಮದಲ್ಲಿ.
ಜಯಪುರ ಹೋಬಳಿಗೆ ಸೇರಿದ ಗೋಪಾಲಪುರ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣ ಜಲಾವೃತಗೊಂಡು ದಿನಗಳು ಉರುಳುತ್ತಿವೆ. ಶಿಕ್ಷಕರು ಮತ್ತು ಮಕ್ಕಳು ಓಡಾಡಲು ಪರದಾಟವಾಗಿದ್ದು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಪಕ್ಕದಲ್ಲಿರುವ ಮುಳ್ಳೂರು ಕೆರೆ ಕೋಡಿ ಹರಿದು ನೀರು ಹರಿದು ಜಲಾವೃತಗೊಂಡು 20 ದಿನಗಳು ಕಳೆಯುತ್ತಿವೆ. ಈಗಾಗಲೇ ಅಧಿಕಾರಿಗಳಿಗೆ ಅವ್ಯವಸ್ಥೆ ಸಂಬಂಧ ದೂರು ನೀಡಲಾಗಿದೆ ಆದರೆ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಶಿಕ್ಷಣ ಇಲಾಖೆ ಅಧಿಕಾರಿಗಳಾಗಲಿ ಈ ಬಗ್ಗೆ ನಿರ್ಲಕ್ಷ ವಹಿಸಿರುವುದು ಗ್ರಾಮಸ್ಥರ ಕಣ್ಣು ಕೆಂಪಾಗುವಂತೆ ಮಾಡಿದೆ ಶಾಲೆಯ ಮುಂಭಾಗದ ಆವರಣದ ಜಾಗದಲ್ಲಿ ಸಂಪೂರ್ಣ ನೀರು ನಿಂತಿರುವ ಹಿನ್ನೆಲೆಯಲ್ಲಿ ಓಡಾಡಲು ಸ್ಥಳವಿಲ್ಲದಂತಾಗಿದೆ. ಇದರಿಂದ ಶಾಲೆಯ ಹಿಂಭಾಗದಲ್ಲಿನ ಕಿರಿದಾದ ಜಾಗದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆ ಪ್ರವೇಶಿಸುತ್ತಿದ್ದಾರೆ. ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ನೀರು ತುಂಬಿದ ನಂತರ ಮಕ್ಕಳು ಶಾಲೆಗೆ ಹಾಜರಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಜೊತೆಗೆ ಶೌಚಾಲಯಕ್ಕೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಶಾಲೆಯ ಆವರಣದಲ್ಲಿ ನೀರು ನಿಂತು ಮಕ್ಕಳಿಗೆ ತೊಂದರೆಯಾಗುತ್ತಿರುವ ಕುರಿತು ಗ್ರಾಮಸ್ಥರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ.ಈ ಬಗ್ಗೆ ಯಾವುದೇ ಅಗತ್ಯ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…