ಜಿಲ್ಲೆಗಳು

ದುರಸ್ತಿಯಾಗದ ಶಾಲಾ ಮೇಲ್ಚಾವಣಿ : ಮಳೆ ನಡುವೆಯೇ ವಿದ್ಯಾರ್ಥಿಗಳಿಗೆ ಪಾಠ !

ಹನೂರು: ಕಳೆದ 2 ದಿನಗಳಿಂದ ಜಿಟಿಜಿಟಿ ಮಳೆ ಬೀಳುತ್ತಿರುವ ಹಿನ್ನೆಲೆ ಪಳನಿಮೇಡು ಶಾಲೆಯ ಮೇಲ್ಚಾವಣಿ ದುರಸ್ತಿ ಗೊಂಡಿರುವುದರಿಂದ ಮಳೆಯ ನೀರು ಶಾಲೆಯ ಒಳಗೆ ಬೀಳುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಕ್ಕೆ ತೀವ್ರ ತೊಂದರೆಯಾಗಿದೆ.

ತಾಲ್ಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದಲ್ಲಿ ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ 130 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 130 ವಿದ್ಯಾರ್ಥಿಗಳಿಗೆ ಕೇವಲ 5 ಕೊಠಡಿ ಗಳಿದ್ದು ಇದರಲ್ಲಿ 2 ಮಂಗಳೂರು ಹಂಚಿನ ಕಟ್ಟಡಗಳು ತೀವ್ರ ದುರಸ್ತಿಗೊಂಡಿದೆ. ಇದಲ್ಲದೆ ಕೋತಿಗಳ ಹಾವಳಿ ಹೆಚ್ಚಿರುವುದರಿಂದ ಮೇಲ್ಚಾವಣಿ ದುರಸ್ತಿಗೊಂಡಿದೆ . ಇನ್ನೂ ಇರುವ 3 ಕೊಠಡಿಗಳು ಆರ್ ಸಿಸಿ ಕಟ್ಟಡ ಗಳಾಗಿದ್ದರೂ ಸಹ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಗೋಡೆಗಳು ಶಿಥಿಲ ಗೊಂಡಿದೆ.ಇದರಿಂದ ಮಳೆಗಾಲದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಲಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಎಚ್ಚರಿಕೆ : ಪಳನಿಮೇಡು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ದುರಸ್ತಿಗೊಂಡಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದ್ದರು ಸಹ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಇದರಿಂದ ನಮ್ಮ ವಿದ್ಯಾರ್ಥಿಗಳಿಗೆ ಯಾವುದಾದರು ಅವಘಡಗಳು ಸಂಭವಿಸಿದರೆ ಇದಕ್ಕೆ ಯಾರು ಹೊಣೆ? ಶೀಘ್ರವೇ ಸಂಬಂಧಪಟ್ಟ ಅಧಿಕಾರಿಗಳು ದುರಸ್ತಿಗೆ ಕ್ರಮ ಕೈಗೊಳ್ಳದಿದ್ದರೆ ನಮ್ಮ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೆ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪೋಷಕರು ಎಚ್ಚರಿಕೆ ನೀಡಿದ್ದಾರೆ.

ಶಾಲೆಯ ಮೇಲ್ಚಾವಣಿ ದುರಸ್ತಿಗೊಂಡಿರುವ ಬಗ್ಗೆ ಈಗಾಗಲೇ ಗಮನಕ್ಕೆ ಬಂದಿದ್ದು, ಮೇಲ್ಚಾವಣಿ ದುರಸ್ತಿಗೆ ಅನುದಾನ ನೀಡುವಂತೆ ಇಲಾಖೆಗೆ ಪತ್ರ ಬರೆಯಲಾಗಿದೆ.

ಶಿವರಾಜು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹನೂರು ಶೈಕ್ಷಣಿಕ ವಲಯ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago