ಜಿಲ್ಲೆಗಳು

ಶಾಲಾ ಕಟ್ಟಡ ದುರಸ್ತಿಗಾಗಿ ವಿದ್ಯಾರ್ಥಿಗಳಿಂದ ಪತ್ರ ಚಳವಳಿ

ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರ ರವಾನೆ

ಮಳವಳ್ಳಿ : 1942 ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದು, ಇದನ್ನು ದುರಸ್ತಿ ಪಡಿಸಿ ಶಿಕ್ಷಣ ಪಡೆಯಲು ನೆರವು ನೀಡುವಂತೆ ಒತ್ತಾಯಿಸಿ ಶಾಲಾ ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಮನವಿ ಪತ್ರ ಬರೆದು ಅಂಚೆ ಮೂಲಕ ರವಾನಿಸಿ ಪತ್ರ ಚಳವಳಿ ನಡೆಸಿದರು.
ತಾಲ್ಲೂಕಿನ ಮೇಗಳಪುರದ ಸರ್ಕಾರಿ ಶಾಲೆಯನ್ನು ೧೯೪೨ರಲ್ಲಿ ನಿರ್ಮಾಣ ಮಾಡಲಾಗಿದ್ದು, ಪ್ರಸ್ತುತ ಗೋಡೆ ಬಿರುಕು ಬಿಟ್ಟಿದೆ. ಮಳೆ ಬಂದರೆ ಸೋರುತ್ತಿದೆ, ಕೂರಲು ಡೆಸ್ಕ್ ಇಲ್ಲದೆ ನೆಲದ ಮೇಲೆ ಕೂರುವಂತಾಗಿದೆ. ಕಟ್ಟಡ ನಿರ್ಮಿಸಿ ೮೦ ವರ್ಷವಾಗಿರುವುದರಿಂದ ಯಾವಾಗ ಕುಸಿಯುತ್ತದೋ, ಯಾವಾಗ ಬೀಳುತ್ತದೋ ಎಂಬ ಭಯವಿದೆ. ಇದರಿಂದ ಶಿಕ್ಷಣವನ್ನು ಅತಂಕದಲ್ಲಿ ಪಡೆಯಬೇಕಿದೆ. ಕೂಡಲೇ ಮುಖ್ಯಮಂತ್ರಿಗಳು ನಮ್ಮ ಮನವಿಯನ್ನು ಪರಿಷ್ಕರಿಸಿ ಶಾಲೆಯನ್ನು ದುರಸ್ತಿಪಡಿಸುವಂತೆ ಮಕ್ಕಳು ಸಾಮೂಹಿಕವಾಗಿ ಪತ್ರ ಚಳವಳಿ ನಡೆಸಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕ ಚುಂಚಣ್ಣ ಮಾತನಾಡಿ, ಕುಸಿಯುವ ಹಂತದಲ್ಲಿರುವ ಶಾಲಾ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ಕಟ್ಟಿಸಿಕೊಡುವಂತೆ ಹಾಗೂ ದುರಸ್ತಿಪಡಿಸುವಂತೆ ಈಗಾಗಲೇ ಸಂಬAಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಕೆಲಸ ಆಗಿಲ್ಲ. ಆದ್ದರಿಂದ ಗ್ರಾಮದ ದಾನಿಗಳು, ಉದ್ಯಮಿಗಳು, ಸಂಬAಧಪಟ್ಟ ಇಲಾಖೆಯವರು ಈ ಬಗ್ಗೆ ಕ್ರಮಕೈಗೊಂಡು ಶಾಲಾ ಕಟ್ಟಡವನ್ನು ದುರಸ್ತಿಪಡಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.  ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿ ಹಾಜರಿದ್ದರು. ಮೇಗಳಪುರದ ಶಾಲಾ ಕಟ್ಟಡವನ್ನು ದುರಸ್ತಿಪಡಿಸುವಂತೆ ವಿದ್ಯಾರ್ಥಿಗಳು ಸಿಎಂ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಕಳುಹಿಸಿದರು.

andolanait

Recent Posts

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

13 mins ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

24 mins ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

1 hour ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

2 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

3 hours ago

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

3 hours ago