ಜಿಲ್ಲೆಗಳು

ಶಾಲಾ ಕಟ್ಟಡ ದುರಸ್ತಿಗಾಗಿ ವಿದ್ಯಾರ್ಥಿಗಳಿಂದ ಪತ್ರ ಚಳವಳಿ

ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರ ರವಾನೆ

ಮಳವಳ್ಳಿ : 1942 ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದು, ಇದನ್ನು ದುರಸ್ತಿ ಪಡಿಸಿ ಶಿಕ್ಷಣ ಪಡೆಯಲು ನೆರವು ನೀಡುವಂತೆ ಒತ್ತಾಯಿಸಿ ಶಾಲಾ ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಮನವಿ ಪತ್ರ ಬರೆದು ಅಂಚೆ ಮೂಲಕ ರವಾನಿಸಿ ಪತ್ರ ಚಳವಳಿ ನಡೆಸಿದರು.
ತಾಲ್ಲೂಕಿನ ಮೇಗಳಪುರದ ಸರ್ಕಾರಿ ಶಾಲೆಯನ್ನು ೧೯೪೨ರಲ್ಲಿ ನಿರ್ಮಾಣ ಮಾಡಲಾಗಿದ್ದು, ಪ್ರಸ್ತುತ ಗೋಡೆ ಬಿರುಕು ಬಿಟ್ಟಿದೆ. ಮಳೆ ಬಂದರೆ ಸೋರುತ್ತಿದೆ, ಕೂರಲು ಡೆಸ್ಕ್ ಇಲ್ಲದೆ ನೆಲದ ಮೇಲೆ ಕೂರುವಂತಾಗಿದೆ. ಕಟ್ಟಡ ನಿರ್ಮಿಸಿ ೮೦ ವರ್ಷವಾಗಿರುವುದರಿಂದ ಯಾವಾಗ ಕುಸಿಯುತ್ತದೋ, ಯಾವಾಗ ಬೀಳುತ್ತದೋ ಎಂಬ ಭಯವಿದೆ. ಇದರಿಂದ ಶಿಕ್ಷಣವನ್ನು ಅತಂಕದಲ್ಲಿ ಪಡೆಯಬೇಕಿದೆ. ಕೂಡಲೇ ಮುಖ್ಯಮಂತ್ರಿಗಳು ನಮ್ಮ ಮನವಿಯನ್ನು ಪರಿಷ್ಕರಿಸಿ ಶಾಲೆಯನ್ನು ದುರಸ್ತಿಪಡಿಸುವಂತೆ ಮಕ್ಕಳು ಸಾಮೂಹಿಕವಾಗಿ ಪತ್ರ ಚಳವಳಿ ನಡೆಸಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕ ಚುಂಚಣ್ಣ ಮಾತನಾಡಿ, ಕುಸಿಯುವ ಹಂತದಲ್ಲಿರುವ ಶಾಲಾ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ಕಟ್ಟಿಸಿಕೊಡುವಂತೆ ಹಾಗೂ ದುರಸ್ತಿಪಡಿಸುವಂತೆ ಈಗಾಗಲೇ ಸಂಬAಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಕೆಲಸ ಆಗಿಲ್ಲ. ಆದ್ದರಿಂದ ಗ್ರಾಮದ ದಾನಿಗಳು, ಉದ್ಯಮಿಗಳು, ಸಂಬAಧಪಟ್ಟ ಇಲಾಖೆಯವರು ಈ ಬಗ್ಗೆ ಕ್ರಮಕೈಗೊಂಡು ಶಾಲಾ ಕಟ್ಟಡವನ್ನು ದುರಸ್ತಿಪಡಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.  ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿ ಹಾಜರಿದ್ದರು. ಮೇಗಳಪುರದ ಶಾಲಾ ಕಟ್ಟಡವನ್ನು ದುರಸ್ತಿಪಡಿಸುವಂತೆ ವಿದ್ಯಾರ್ಥಿಗಳು ಸಿಎಂ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಕಳುಹಿಸಿದರು.

andolanait

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

9 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

10 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

10 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

10 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

10 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

11 hours ago