ಜಿಲ್ಲೆಗಳು

ಶಾಲಾ ಕಟ್ಟಡ ದುರಸ್ತಿಗಾಗಿ ವಿದ್ಯಾರ್ಥಿಗಳಿಂದ ಪತ್ರ ಚಳವಳಿ

ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರ ರವಾನೆ

ಮಳವಳ್ಳಿ : 1942 ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದು, ಇದನ್ನು ದುರಸ್ತಿ ಪಡಿಸಿ ಶಿಕ್ಷಣ ಪಡೆಯಲು ನೆರವು ನೀಡುವಂತೆ ಒತ್ತಾಯಿಸಿ ಶಾಲಾ ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಮನವಿ ಪತ್ರ ಬರೆದು ಅಂಚೆ ಮೂಲಕ ರವಾನಿಸಿ ಪತ್ರ ಚಳವಳಿ ನಡೆಸಿದರು.
ತಾಲ್ಲೂಕಿನ ಮೇಗಳಪುರದ ಸರ್ಕಾರಿ ಶಾಲೆಯನ್ನು ೧೯೪೨ರಲ್ಲಿ ನಿರ್ಮಾಣ ಮಾಡಲಾಗಿದ್ದು, ಪ್ರಸ್ತುತ ಗೋಡೆ ಬಿರುಕು ಬಿಟ್ಟಿದೆ. ಮಳೆ ಬಂದರೆ ಸೋರುತ್ತಿದೆ, ಕೂರಲು ಡೆಸ್ಕ್ ಇಲ್ಲದೆ ನೆಲದ ಮೇಲೆ ಕೂರುವಂತಾಗಿದೆ. ಕಟ್ಟಡ ನಿರ್ಮಿಸಿ ೮೦ ವರ್ಷವಾಗಿರುವುದರಿಂದ ಯಾವಾಗ ಕುಸಿಯುತ್ತದೋ, ಯಾವಾಗ ಬೀಳುತ್ತದೋ ಎಂಬ ಭಯವಿದೆ. ಇದರಿಂದ ಶಿಕ್ಷಣವನ್ನು ಅತಂಕದಲ್ಲಿ ಪಡೆಯಬೇಕಿದೆ. ಕೂಡಲೇ ಮುಖ್ಯಮಂತ್ರಿಗಳು ನಮ್ಮ ಮನವಿಯನ್ನು ಪರಿಷ್ಕರಿಸಿ ಶಾಲೆಯನ್ನು ದುರಸ್ತಿಪಡಿಸುವಂತೆ ಮಕ್ಕಳು ಸಾಮೂಹಿಕವಾಗಿ ಪತ್ರ ಚಳವಳಿ ನಡೆಸಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕ ಚುಂಚಣ್ಣ ಮಾತನಾಡಿ, ಕುಸಿಯುವ ಹಂತದಲ್ಲಿರುವ ಶಾಲಾ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ಕಟ್ಟಿಸಿಕೊಡುವಂತೆ ಹಾಗೂ ದುರಸ್ತಿಪಡಿಸುವಂತೆ ಈಗಾಗಲೇ ಸಂಬAಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಕೆಲಸ ಆಗಿಲ್ಲ. ಆದ್ದರಿಂದ ಗ್ರಾಮದ ದಾನಿಗಳು, ಉದ್ಯಮಿಗಳು, ಸಂಬAಧಪಟ್ಟ ಇಲಾಖೆಯವರು ಈ ಬಗ್ಗೆ ಕ್ರಮಕೈಗೊಂಡು ಶಾಲಾ ಕಟ್ಟಡವನ್ನು ದುರಸ್ತಿಪಡಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.  ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿ ಹಾಜರಿದ್ದರು. ಮೇಗಳಪುರದ ಶಾಲಾ ಕಟ್ಟಡವನ್ನು ದುರಸ್ತಿಪಡಿಸುವಂತೆ ವಿದ್ಯಾರ್ಥಿಗಳು ಸಿಎಂ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಕಳುಹಿಸಿದರು.

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

2 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

2 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

3 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

3 hours ago