ಜಿಲ್ಲೆಗಳು

ಶಾಲಾ ಕಟ್ಟಡ ದುರಸ್ತಿಗಾಗಿ ವಿದ್ಯಾರ್ಥಿಗಳಿಂದ ಪತ್ರ ಚಳವಳಿ

ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರ ರವಾನೆ

ಮಳವಳ್ಳಿ : 1942 ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದು, ಇದನ್ನು ದುರಸ್ತಿ ಪಡಿಸಿ ಶಿಕ್ಷಣ ಪಡೆಯಲು ನೆರವು ನೀಡುವಂತೆ ಒತ್ತಾಯಿಸಿ ಶಾಲಾ ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಮನವಿ ಪತ್ರ ಬರೆದು ಅಂಚೆ ಮೂಲಕ ರವಾನಿಸಿ ಪತ್ರ ಚಳವಳಿ ನಡೆಸಿದರು.
ತಾಲ್ಲೂಕಿನ ಮೇಗಳಪುರದ ಸರ್ಕಾರಿ ಶಾಲೆಯನ್ನು ೧೯೪೨ರಲ್ಲಿ ನಿರ್ಮಾಣ ಮಾಡಲಾಗಿದ್ದು, ಪ್ರಸ್ತುತ ಗೋಡೆ ಬಿರುಕು ಬಿಟ್ಟಿದೆ. ಮಳೆ ಬಂದರೆ ಸೋರುತ್ತಿದೆ, ಕೂರಲು ಡೆಸ್ಕ್ ಇಲ್ಲದೆ ನೆಲದ ಮೇಲೆ ಕೂರುವಂತಾಗಿದೆ. ಕಟ್ಟಡ ನಿರ್ಮಿಸಿ ೮೦ ವರ್ಷವಾಗಿರುವುದರಿಂದ ಯಾವಾಗ ಕುಸಿಯುತ್ತದೋ, ಯಾವಾಗ ಬೀಳುತ್ತದೋ ಎಂಬ ಭಯವಿದೆ. ಇದರಿಂದ ಶಿಕ್ಷಣವನ್ನು ಅತಂಕದಲ್ಲಿ ಪಡೆಯಬೇಕಿದೆ. ಕೂಡಲೇ ಮುಖ್ಯಮಂತ್ರಿಗಳು ನಮ್ಮ ಮನವಿಯನ್ನು ಪರಿಷ್ಕರಿಸಿ ಶಾಲೆಯನ್ನು ದುರಸ್ತಿಪಡಿಸುವಂತೆ ಮಕ್ಕಳು ಸಾಮೂಹಿಕವಾಗಿ ಪತ್ರ ಚಳವಳಿ ನಡೆಸಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕ ಚುಂಚಣ್ಣ ಮಾತನಾಡಿ, ಕುಸಿಯುವ ಹಂತದಲ್ಲಿರುವ ಶಾಲಾ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ಕಟ್ಟಿಸಿಕೊಡುವಂತೆ ಹಾಗೂ ದುರಸ್ತಿಪಡಿಸುವಂತೆ ಈಗಾಗಲೇ ಸಂಬAಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಕೆಲಸ ಆಗಿಲ್ಲ. ಆದ್ದರಿಂದ ಗ್ರಾಮದ ದಾನಿಗಳು, ಉದ್ಯಮಿಗಳು, ಸಂಬAಧಪಟ್ಟ ಇಲಾಖೆಯವರು ಈ ಬಗ್ಗೆ ಕ್ರಮಕೈಗೊಂಡು ಶಾಲಾ ಕಟ್ಟಡವನ್ನು ದುರಸ್ತಿಪಡಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು.  ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿ ಹಾಜರಿದ್ದರು. ಮೇಗಳಪುರದ ಶಾಲಾ ಕಟ್ಟಡವನ್ನು ದುರಸ್ತಿಪಡಿಸುವಂತೆ ವಿದ್ಯಾರ್ಥಿಗಳು ಸಿಎಂ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಕಳುಹಿಸಿದರು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

2 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

3 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

3 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

4 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

4 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

5 hours ago