ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರ ರವಾನೆ
ಮಳವಳ್ಳಿ : 1942 ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದು, ಇದನ್ನು ದುರಸ್ತಿ ಪಡಿಸಿ ಶಿಕ್ಷಣ ಪಡೆಯಲು ನೆರವು ನೀಡುವಂತೆ ಒತ್ತಾಯಿಸಿ ಶಾಲಾ ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಮನವಿ ಪತ್ರ ಬರೆದು ಅಂಚೆ ಮೂಲಕ ರವಾನಿಸಿ ಪತ್ರ ಚಳವಳಿ ನಡೆಸಿದರು.
ತಾಲ್ಲೂಕಿನ ಮೇಗಳಪುರದ ಸರ್ಕಾರಿ ಶಾಲೆಯನ್ನು ೧೯೪೨ರಲ್ಲಿ ನಿರ್ಮಾಣ ಮಾಡಲಾಗಿದ್ದು, ಪ್ರಸ್ತುತ ಗೋಡೆ ಬಿರುಕು ಬಿಟ್ಟಿದೆ. ಮಳೆ ಬಂದರೆ ಸೋರುತ್ತಿದೆ, ಕೂರಲು ಡೆಸ್ಕ್ ಇಲ್ಲದೆ ನೆಲದ ಮೇಲೆ ಕೂರುವಂತಾಗಿದೆ. ಕಟ್ಟಡ ನಿರ್ಮಿಸಿ ೮೦ ವರ್ಷವಾಗಿರುವುದರಿಂದ ಯಾವಾಗ ಕುಸಿಯುತ್ತದೋ, ಯಾವಾಗ ಬೀಳುತ್ತದೋ ಎಂಬ ಭಯವಿದೆ. ಇದರಿಂದ ಶಿಕ್ಷಣವನ್ನು ಅತಂಕದಲ್ಲಿ ಪಡೆಯಬೇಕಿದೆ. ಕೂಡಲೇ ಮುಖ್ಯಮಂತ್ರಿಗಳು ನಮ್ಮ ಮನವಿಯನ್ನು ಪರಿಷ್ಕರಿಸಿ ಶಾಲೆಯನ್ನು ದುರಸ್ತಿಪಡಿಸುವಂತೆ ಮಕ್ಕಳು ಸಾಮೂಹಿಕವಾಗಿ ಪತ್ರ ಚಳವಳಿ ನಡೆಸಿ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕ ಚುಂಚಣ್ಣ ಮಾತನಾಡಿ, ಕುಸಿಯುವ ಹಂತದಲ್ಲಿರುವ ಶಾಲಾ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ಕಟ್ಟಿಸಿಕೊಡುವಂತೆ ಹಾಗೂ ದುರಸ್ತಿಪಡಿಸುವಂತೆ ಈಗಾಗಲೇ ಸಂಬAಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಕೆಲಸ ಆಗಿಲ್ಲ. ಆದ್ದರಿಂದ ಗ್ರಾಮದ ದಾನಿಗಳು, ಉದ್ಯಮಿಗಳು, ಸಂಬAಧಪಟ್ಟ ಇಲಾಖೆಯವರು ಈ ಬಗ್ಗೆ ಕ್ರಮಕೈಗೊಂಡು ಶಾಲಾ ಕಟ್ಟಡವನ್ನು ದುರಸ್ತಿಪಡಿಸಿ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿ ಹಾಜರಿದ್ದರು. ಮೇಗಳಪುರದ ಶಾಲಾ ಕಟ್ಟಡವನ್ನು ದುರಸ್ತಿಪಡಿಸುವಂತೆ ವಿದ್ಯಾರ್ಥಿಗಳು ಸಿಎಂ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಕಳುಹಿಸಿದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…