ಮಳವಳ್ಳಿ: ತಾಲ್ಲೂಕಿನ ಬಿ.ಜಿ.ಪುರ ಹೋಬಳಿ ವಾಸುವಳ್ಳಿ ಬೋರೆ ಬಳಿ ಟಿವಿಎಸ್ ಸ್ಕೂಟರ್ಗೆ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ತೀವ್ರ ಗಾಯಗೊಂಡು ದಾರುಣವಾಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಈ ಘಟನೆಯಲ್ಲಿ ಹಳದಾಸನಹಳ್ಳಿ ಗ್ರಾಮದ ಶಿವಮಲ್ಲಪ್ಪ (60) ಹಾಗೂ ಕಗ್ಗಲಿಪುರದ ನಂಜುಂಡಸ್ವಾಮಿ ಸಾವನ್ನಪ್ಪಿರುವ ರೈತರು.
ಇವರಿಬ್ಬರೂ ಟಿವಿಎಸ್ ಸ್ಕೂಟರ್ನಲ್ಲಿ ಬರುತ್ತಿದ್ದಾಗ ವಾಸುವಳ್ಳಿ ಬೊರೆ ಬಳಿ ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ತೂರಿಕೊಂಡು ಹೋಗಿ ರಸ್ತೆಯ ಬದಿಗೆ ಬಿದಿದ್ದಾರೆ, ಸ್ಕೂಟರ್ ಕ್ಯಾಂಟರ್ ಒಳಗಡೆಗೆ ಸಿಲುಕಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲೆ ಹಳದಾಸನಹಳ್ಳಿ ಗ್ರಾಮದ ಶಿವಮಲ್ಲಪ್ಪ ಮೃತಪಟ್ಟರೆ, ಕಗ್ಗಲಿಪುರ ನಂಜುಂಡಸ್ವಾಮಿ ಮಂಡ್ಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬೆಳಕವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಳಕವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತರ ಶವ ಪರೀಕ್ಷೆ ವೇಳೆ ಶಾಸಕ ಡಾ.ಕೆ.ಅನ್ನದಾನಿ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…