ಮಳವಳ್ಳಿ: ತಾಲ್ಲೂಕಿನ ಬಿ.ಜಿ.ಪುರ ಹೋಬಳಿ ವಾಸುವಳ್ಳಿ ಬೋರೆ ಬಳಿ ಟಿವಿಎಸ್ ಸ್ಕೂಟರ್ಗೆ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ತೀವ್ರ ಗಾಯಗೊಂಡು ದಾರುಣವಾಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಈ ಘಟನೆಯಲ್ಲಿ ಹಳದಾಸನಹಳ್ಳಿ ಗ್ರಾಮದ ಶಿವಮಲ್ಲಪ್ಪ (60) ಹಾಗೂ ಕಗ್ಗಲಿಪುರದ ನಂಜುಂಡಸ್ವಾಮಿ ಸಾವನ್ನಪ್ಪಿರುವ ರೈತರು.
ಇವರಿಬ್ಬರೂ ಟಿವಿಎಸ್ ಸ್ಕೂಟರ್ನಲ್ಲಿ ಬರುತ್ತಿದ್ದಾಗ ವಾಸುವಳ್ಳಿ ಬೊರೆ ಬಳಿ ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ತೂರಿಕೊಂಡು ಹೋಗಿ ರಸ್ತೆಯ ಬದಿಗೆ ಬಿದಿದ್ದಾರೆ, ಸ್ಕೂಟರ್ ಕ್ಯಾಂಟರ್ ಒಳಗಡೆಗೆ ಸಿಲುಕಿ ನಜ್ಜುಗುಜ್ಜಾಗಿದೆ. ಸ್ಥಳದಲ್ಲೆ ಹಳದಾಸನಹಳ್ಳಿ ಗ್ರಾಮದ ಶಿವಮಲ್ಲಪ್ಪ ಮೃತಪಟ್ಟರೆ, ಕಗ್ಗಲಿಪುರ ನಂಜುಂಡಸ್ವಾಮಿ ಮಂಡ್ಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬೆಳಕವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಳಕವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತರ ಶವ ಪರೀಕ್ಷೆ ವೇಳೆ ಶಾಸಕ ಡಾ.ಕೆ.ಅನ್ನದಾನಿ ಆಗಮಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…