ಜಿಲ್ಲೆಗಳು

SDPI ಮುಖಂಡರ ಬಂಧನ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಭುವನೇಶ್ವರಿ ವೃತ್ತದ ತನಕ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಕ್ಷದ ಜಿಲ್ಲಾಧ್ಯಕ್ಷ ಅಬ್ರಾರ್‌ಅಹಮ್ಮದ್ ಮಾತನಾಡಿ, ನೆಟ್ಟಾರು ಪ್ರಕರಣವನ್ನು ಮಾತ್ರ ಎನ್.ಐ.ಎಗೆ ಸರ್ಕಾರ ವಹಿಸಿದೆ. ಈ ಪ್ರಕರಣದಲ್ಲಿ ಎನ್.ಐ.ಎ ಸಾಕಷ್ಟು ಜನರನ್ನು ಬಂಧಿಸಿದ್ದರೂ ಯಾರ ಮೇಲೂ ಬಲವಾದ ಸಾಕ್ಷಿಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು ಎನ್.ಐ.ಎ ಮತ್ತಷ್ಟು ಬಂಧನಗಳಿಗೆ ಮುಂದಾಗಿದೆ ಎಂದು ದೂರಿದರು.

ಬಿಜೆಪಿ ತನ್ನ ರಾಜಕೀಯ ಶತ್ರುಗಳನ್ನು ಮಟ್ಟ ಹಾಕಲು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಆದ್ದರಿಂದಲೇ ಅನೇಕ ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸೈಯದ್ ಆರೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್, ಜಿಲ್ಲಾ ಕಾರ್ಯದರ್ಶಿ ಜಬೀನೂರ್, ಜಿಲ್ಲಾ ಖಜಾಂಚಿ ನಯಾಜ್ ಉಲ್ಲಾ, ನಗರಸಭಾ ಸದಸ್ಯರಾದ ಕಲೀಲ್ ಉಲ್ಲಾ, ಮೊಹಮ್ಮದ್ ಅಮೀಕ್, ಅಪ್ಸರ್‌ಪಾಷ, ಜಾಕೀರ್ ಪಾಷ, ದಸಂಸ ಮುಖಂಡರಾದ ಸಂಘಸೇನಾ, ಬಂಗಾರಸ್ವಾಮಿ, ಪಿ.ಯು.ಸಿ.ಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟರಾಜು ಇತರರು ಪಾಲ್ಗೊಂಡಿದ್ದರು.

andolanait

Recent Posts

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

6 mins ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

20 mins ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

35 mins ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

45 mins ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

51 mins ago

ಮಹದೇಶ್ವರ ಬೆಟ್ಟ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ತೆರೆ

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

1 hour ago