ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಭುವನೇಶ್ವರಿ ವೃತ್ತದ ತನಕ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಕ್ಷದ ಜಿಲ್ಲಾಧ್ಯಕ್ಷ ಅಬ್ರಾರ್ಅಹಮ್ಮದ್ ಮಾತನಾಡಿ, ನೆಟ್ಟಾರು ಪ್ರಕರಣವನ್ನು ಮಾತ್ರ ಎನ್.ಐ.ಎಗೆ ಸರ್ಕಾರ ವಹಿಸಿದೆ. ಈ ಪ್ರಕರಣದಲ್ಲಿ ಎನ್.ಐ.ಎ ಸಾಕಷ್ಟು ಜನರನ್ನು ಬಂಧಿಸಿದ್ದರೂ ಯಾರ ಮೇಲೂ ಬಲವಾದ ಸಾಕ್ಷಿಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು ಎನ್.ಐ.ಎ ಮತ್ತಷ್ಟು ಬಂಧನಗಳಿಗೆ ಮುಂದಾಗಿದೆ ಎಂದು ದೂರಿದರು.
ಬಿಜೆಪಿ ತನ್ನ ರಾಜಕೀಯ ಶತ್ರುಗಳನ್ನು ಮಟ್ಟ ಹಾಕಲು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಆದ್ದರಿಂದಲೇ ಅನೇಕ ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸೈಯದ್ ಆರೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್, ಜಿಲ್ಲಾ ಕಾರ್ಯದರ್ಶಿ ಜಬೀನೂರ್, ಜಿಲ್ಲಾ ಖಜಾಂಚಿ ನಯಾಜ್ ಉಲ್ಲಾ, ನಗರಸಭಾ ಸದಸ್ಯರಾದ ಕಲೀಲ್ ಉಲ್ಲಾ, ಮೊಹಮ್ಮದ್ ಅಮೀಕ್, ಅಪ್ಸರ್ಪಾಷ, ಜಾಕೀರ್ ಪಾಷ, ದಸಂಸ ಮುಖಂಡರಾದ ಸಂಘಸೇನಾ, ಬಂಗಾರಸ್ವಾಮಿ, ಪಿ.ಯು.ಸಿ.ಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟರಾಜು ಇತರರು ಪಾಲ್ಗೊಂಡಿದ್ದರು.
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…