ಚಾಮರಾಜನಗರ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬAಧ ರಾಷ್ಟಿçÃಯ ತನಿಖಾ ದಳವು ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಮುಖಂಡ ಇಕ್ಬಾಲ್ ಬೆಳ್ಳಾರೆ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಭುವನೇಶ್ವರಿ ವೃತ್ತದ ತನಕ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಕ್ಷದ ಜಿಲ್ಲಾಧ್ಯಕ್ಷ ಅಬ್ರಾರ್ಅಹಮ್ಮದ್ ಮಾತನಾಡಿ, ನೆಟ್ಟಾರು ಪ್ರಕರಣವನ್ನು ಮಾತ್ರ ಎನ್.ಐ.ಎಗೆ ಸರ್ಕಾರ ವಹಿಸಿದೆ. ಈ ಪ್ರಕರಣದಲ್ಲಿ ಎನ್.ಐ.ಎ ಸಾಕಷ್ಟು ಜನರನ್ನು ಬಂಧಿಸಿದ್ದರೂ ಯಾರ ಮೇಲೂ ಬಲವಾದ ಸಾಕ್ಷಿಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು ಎನ್.ಐ.ಎ ಮತ್ತಷ್ಟು ಬಂಧನಗಳಿಗೆ ಮುಂದಾಗಿದೆ ಎಂದು ದೂರಿದರು.
ಬಿಜೆಪಿ ತನ್ನ ರಾಜಕೀಯ ಶತ್ರುಗಳನ್ನು ಮಟ್ಟ ಹಾಕಲು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಆದ್ದರಿಂದಲೇ ಅನೇಕ ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸೈಯದ್ ಆರೀಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್, ಜಿಲ್ಲಾ ಕಾರ್ಯದರ್ಶಿ ಜಬೀನೂರ್, ಜಿಲ್ಲಾ ಖಜಾಂಚಿ ನಯಾಜ್ ಉಲ್ಲಾ, ನಗರಸಭಾ ಸದಸ್ಯರಾದ ಕಲೀಲ್ ಉಲ್ಲಾ, ಮೊಹಮ್ಮದ್ ಅಮೀಕ್, ಅಪ್ಸರ್ಪಾಷ, ಜಾಕೀರ್ ಪಾಷ, ದಸಂಸ ಮುಖಂಡರಾದ ಸಂಘಸೇನಾ, ಬಂಗಾರಸ್ವಾಮಿ, ಪಿ.ಯು.ಸಿ.ಎಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟರಾಜು ಇತರರು ಪಾಲ್ಗೊಂಡಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…