ಮೈಸೂರು: ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುವುದಾಗಿ ನಂಬಿಸಿ, ವ್ಯಕ್ತಿಯೊಬ್ಬರಿಗೆ ೨೮ ಲಕ್ಷ ರೂ. ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಆದಿಲ್ಖಾನ್ ದುರಾನಿ ಎಂಬುವರು ಕಾರು ಕೊಡಿಸುವುದಾಗಿ ನಂಬಿಸಿ, ನನ್ನಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ಸೈಯದ್ ಕಲೀಂ ಉರ್ ರೆಹಮಾನ್ ಎಂಬುವರು ನರಸಿಂಹರಾಜ ಠಾಣೆಗೆ ದೂರು ದಾಖಲಿಸಿದ್ದಾರೆ.
ಲಷ್ಕರ್ ಮೊಹಲ್ಲಾದ ಅಶೋಕ ರಸ್ತೆಯ ನಿವಾಸಿಯಾಗಿರುವ ಸೈಯದ್ ಕಲೀಂ ಎಂಬುವರು ಸೆಕೆಂಡ್ ಹ್ಯಾಂಡ್ ಆಡಿ-೭7ಕಾರು ಖರೀದಿಸುವ ಸಂಬಂಧ 28 ಲಕ್ಷ ರೂ. ಮಾತುಕತೆಯಾಯಿತು. ಆರಂಭದಲ್ಲಿ 8 ಲಕ್ಷ ರೂ.ನಗದು ರೂಪದಲ್ಲಿ ಉಳಿಕೆ ಮೊತ್ತವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿದೆನು. ಇದಾದ ಬಳಿಕ ಕಾರು ನೀಡಿದ್ದ ಆದಿಲ್, ದಾಖಲಾತಿ ನೀಡಿರಲಿಲ್ಲ.
ಕಾರು ಪಡೆದ ಕೆಲವೇ ದಿನಗಳಲ್ಲಿ ಎಂಜಿನ್ ಸಮಸ್ಯೆ ಕಾಣಿಸಿಕೊಂಡಿತು. ಈ ಬಗ್ಗೆ ಆದಿಲ್ಗೆ ತಿಳಿಸಿದ ವೇಳೆ ಸರಿ ಮಾಡಿಕೊಡುವುದಾಗಿ ನಂಬಿಸಿ, ಕಾರು ಕೊಂಡೊಯ್ದು ಇದುವರೆಗೂ ಹಿಂತಿರುಗಿಸಿಲ್ಲ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…