ಜಿಲ್ಲೆಗಳು

ವೃದ್ಧೆಗೆ ವಂಚಿಸಿ ಚಿನ್ನಾಭರಣ ಕಳವು

ಕುಶಾಲನಗರ :  ಅಪರಿಚಿತ ವ್ಯಕ್ತಿಯೋರ್ವ ವೃದ್ಧೆಯನ್ನು ವಶೀಕರಣ ಮಾಡಿ ವೃದ್ಧೆಯ ಚಿನ್ನಾಭರಣ ಅಪಹರಿಸಿದ ಘಟನೆ ಕುಶಾಲನಗರದ ಜನತಾ ಕಾಲನಿಯಲ್ಲಿ ನಡೆದಿದೆ. ಜನತಾ ಕಾಲನಿ 1ನೇ ಕ್ರಾಸ್ ನಿವಾಸಿಯಾದ ಅಬಕಾರಿ
ಇಲಾಖೆಯ ನಿವೃತ್ತ ನೌಕರ ಐತಪ್ಪನವರವ ಪತ್ನಿ ದೇವಮ್ಮನವರ ಚಿನ್ನಾಭರಣ ಕಳವು‌‌ ಮಾಡಲಾಗಿದೆ. ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ, ದೇವಮ್ಮ‌ನವರನ್ನು ವಶೀಕರಿಸಿ ಚಿನ್ನಾಭರಣ ಕಳವು‌ ಮಾಡಲಾಗಿದೆ. ಮನೆ ಸಮೀಪದ ಗೌರಿ ಗಣೇಶ
ದೇವಾಲಯಕ್ಕೆ ಕಾಣಿಕೆ ನೀಡುವ ನೆಪದಲ್ಲಿ ಮನೆಯಂಗಳಕ್ಕೆ ಬಂದ ಅಪರಿಚಿತ ವ್ಯಕ್ತಿ, ಗಂಧದ ಕಡ್ಡಿ, ಬಿಸ್ಕತ್ ಪ್ಯಾಕ್, ಫೈವ್ ಸ್ಟಾರ್ ತುಂಬಿದ್ದ ಪ್ಲಾಸ್ಟಿಕ್ ಕವ ರ್ ಅನ್ನು ವೃದ್ಧೆಗೆ ನೀಡಿದ್ದಾನೆ. 100 ರೂಗಳ ಐದು ನೋಟು ಕೈಗೆ ನೀಡಿ ದೇವಾಲಯಕ್ಕೆ ಕಾಣಿಕೆ ಅರ್ಪಿಸಿ ಎಂದ ಬಳಿಕ, 100 ರೂ ನ ಒಂದು ನೋಟನ್ನು ಮಹಿಳೆಯ ಕೈಗೆ ಸುತ್ತುತ್ತಿದ್ದಂತೆ ಮಹಿಳೆ ಬಳೆ ಬಿಚ್ಚಿ ಕೊಟ್ಟಿದ್ದಾರೆ.
ಇವರ ಜೊತೆಯಲ್ಲಿ ಪತಿ ಐತಪ್ಪ ಕೂಡ ಇದ್ದರು ಒಂದು ಹಂತದಲ್ಲಿ ಬಳೆ ಬಿಚ್ಚಿಕೊಟ್ಟ ಬಳಿಕ ಕುತ್ತಿಗೆಗೆ ಕೈ ಹಾಕುತ್ತಿದ್ದಂತೆ ಪತಿ ಐತಪ್ಪ ಅವರಿಗೆ‌ ಮೋಸದ ವಾಸನೆ‌ ಬಂದಿದೆ. ನಂತರ ಸರವನ್ನು ಕೊಡಬೇಡ ಎನ್ನುತ್ತಿದ್ದಂತೆ ಅಪರಿಚಿತ ಸ್ಥಳದಿಂದ
ಕಾಲ್ಕಿತ್ತಿದ್ದು, ಸುಧಾರಿಸಿಕೊಂಡು ನೋಡುವಷ್ಟರಲ್ಲಿ ಬಳೆಯೊಂದಿಗೆ ಅಪರಿಚಿತ ಮಾಯವಾಗಿದ್ದಾನೆ. ಬೈಕ್ಅನ್ನು ಮುಖ್ಯ ರಸ್ತೆಯಲ್ಲಿ ನಿಲ್ಲಿಸಿ ಬಂದಿದ್ದ ಅಪರಿಚಿತನೊಂದಿಗೆ ಮತ್ತೊಬ್ಬ ಇದ್ದ ಎನ್ನಲಾಗಿದ್ದು,
ಸ್ಥಳಕ್ಕೆ ಭೇಟಿ ನೀಡಿದ ಕುಶಾಲನಗರ ಪಟ್ಟಣ ಪೊಲೀಸರು ಪರಿಶೀಲನೆ ನಡೆಸಿ, ಖದೀಮರ ಬೆನ್ನಟ್ಟಿದ್ದಾರೆ.
ಪಟ್ಟಣದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಲಿದ್ದು, ಪೊಲೀಸರು ಇದರ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago