ಜಿಲ್ಲೆಗಳು

ವೃದ್ಧೆಗೆ ವಂಚಿಸಿ ಚಿನ್ನಾಭರಣ ಕಳವು

ಕುಶಾಲನಗರ :  ಅಪರಿಚಿತ ವ್ಯಕ್ತಿಯೋರ್ವ ವೃದ್ಧೆಯನ್ನು ವಶೀಕರಣ ಮಾಡಿ ವೃದ್ಧೆಯ ಚಿನ್ನಾಭರಣ ಅಪಹರಿಸಿದ ಘಟನೆ ಕುಶಾಲನಗರದ ಜನತಾ ಕಾಲನಿಯಲ್ಲಿ ನಡೆದಿದೆ. ಜನತಾ ಕಾಲನಿ 1ನೇ ಕ್ರಾಸ್ ನಿವಾಸಿಯಾದ ಅಬಕಾರಿ
ಇಲಾಖೆಯ ನಿವೃತ್ತ ನೌಕರ ಐತಪ್ಪನವರವ ಪತ್ನಿ ದೇವಮ್ಮನವರ ಚಿನ್ನಾಭರಣ ಕಳವು‌‌ ಮಾಡಲಾಗಿದೆ. ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ, ದೇವಮ್ಮ‌ನವರನ್ನು ವಶೀಕರಿಸಿ ಚಿನ್ನಾಭರಣ ಕಳವು‌ ಮಾಡಲಾಗಿದೆ. ಮನೆ ಸಮೀಪದ ಗೌರಿ ಗಣೇಶ
ದೇವಾಲಯಕ್ಕೆ ಕಾಣಿಕೆ ನೀಡುವ ನೆಪದಲ್ಲಿ ಮನೆಯಂಗಳಕ್ಕೆ ಬಂದ ಅಪರಿಚಿತ ವ್ಯಕ್ತಿ, ಗಂಧದ ಕಡ್ಡಿ, ಬಿಸ್ಕತ್ ಪ್ಯಾಕ್, ಫೈವ್ ಸ್ಟಾರ್ ತುಂಬಿದ್ದ ಪ್ಲಾಸ್ಟಿಕ್ ಕವ ರ್ ಅನ್ನು ವೃದ್ಧೆಗೆ ನೀಡಿದ್ದಾನೆ. 100 ರೂಗಳ ಐದು ನೋಟು ಕೈಗೆ ನೀಡಿ ದೇವಾಲಯಕ್ಕೆ ಕಾಣಿಕೆ ಅರ್ಪಿಸಿ ಎಂದ ಬಳಿಕ, 100 ರೂ ನ ಒಂದು ನೋಟನ್ನು ಮಹಿಳೆಯ ಕೈಗೆ ಸುತ್ತುತ್ತಿದ್ದಂತೆ ಮಹಿಳೆ ಬಳೆ ಬಿಚ್ಚಿ ಕೊಟ್ಟಿದ್ದಾರೆ.
ಇವರ ಜೊತೆಯಲ್ಲಿ ಪತಿ ಐತಪ್ಪ ಕೂಡ ಇದ್ದರು ಒಂದು ಹಂತದಲ್ಲಿ ಬಳೆ ಬಿಚ್ಚಿಕೊಟ್ಟ ಬಳಿಕ ಕುತ್ತಿಗೆಗೆ ಕೈ ಹಾಕುತ್ತಿದ್ದಂತೆ ಪತಿ ಐತಪ್ಪ ಅವರಿಗೆ‌ ಮೋಸದ ವಾಸನೆ‌ ಬಂದಿದೆ. ನಂತರ ಸರವನ್ನು ಕೊಡಬೇಡ ಎನ್ನುತ್ತಿದ್ದಂತೆ ಅಪರಿಚಿತ ಸ್ಥಳದಿಂದ
ಕಾಲ್ಕಿತ್ತಿದ್ದು, ಸುಧಾರಿಸಿಕೊಂಡು ನೋಡುವಷ್ಟರಲ್ಲಿ ಬಳೆಯೊಂದಿಗೆ ಅಪರಿಚಿತ ಮಾಯವಾಗಿದ್ದಾನೆ. ಬೈಕ್ಅನ್ನು ಮುಖ್ಯ ರಸ್ತೆಯಲ್ಲಿ ನಿಲ್ಲಿಸಿ ಬಂದಿದ್ದ ಅಪರಿಚಿತನೊಂದಿಗೆ ಮತ್ತೊಬ್ಬ ಇದ್ದ ಎನ್ನಲಾಗಿದ್ದು,
ಸ್ಥಳಕ್ಕೆ ಭೇಟಿ ನೀಡಿದ ಕುಶಾಲನಗರ ಪಟ್ಟಣ ಪೊಲೀಸರು ಪರಿಶೀಲನೆ ನಡೆಸಿ, ಖದೀಮರ ಬೆನ್ನಟ್ಟಿದ್ದಾರೆ.
ಪಟ್ಟಣದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಲಿದ್ದು, ಪೊಲೀಸರು ಇದರ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

3 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

5 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

7 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

7 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

8 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

11 hours ago