ಜಿಲ್ಲೆಗಳು

ವೃದ್ಧೆಗೆ ವಂಚಿಸಿ ಚಿನ್ನಾಭರಣ ಕಳವು

ಕುಶಾಲನಗರ :  ಅಪರಿಚಿತ ವ್ಯಕ್ತಿಯೋರ್ವ ವೃದ್ಧೆಯನ್ನು ವಶೀಕರಣ ಮಾಡಿ ವೃದ್ಧೆಯ ಚಿನ್ನಾಭರಣ ಅಪಹರಿಸಿದ ಘಟನೆ ಕುಶಾಲನಗರದ ಜನತಾ ಕಾಲನಿಯಲ್ಲಿ ನಡೆದಿದೆ. ಜನತಾ ಕಾಲನಿ 1ನೇ ಕ್ರಾಸ್ ನಿವಾಸಿಯಾದ ಅಬಕಾರಿ
ಇಲಾಖೆಯ ನಿವೃತ್ತ ನೌಕರ ಐತಪ್ಪನವರವ ಪತ್ನಿ ದೇವಮ್ಮನವರ ಚಿನ್ನಾಭರಣ ಕಳವು‌‌ ಮಾಡಲಾಗಿದೆ. ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ, ದೇವಮ್ಮ‌ನವರನ್ನು ವಶೀಕರಿಸಿ ಚಿನ್ನಾಭರಣ ಕಳವು‌ ಮಾಡಲಾಗಿದೆ. ಮನೆ ಸಮೀಪದ ಗೌರಿ ಗಣೇಶ
ದೇವಾಲಯಕ್ಕೆ ಕಾಣಿಕೆ ನೀಡುವ ನೆಪದಲ್ಲಿ ಮನೆಯಂಗಳಕ್ಕೆ ಬಂದ ಅಪರಿಚಿತ ವ್ಯಕ್ತಿ, ಗಂಧದ ಕಡ್ಡಿ, ಬಿಸ್ಕತ್ ಪ್ಯಾಕ್, ಫೈವ್ ಸ್ಟಾರ್ ತುಂಬಿದ್ದ ಪ್ಲಾಸ್ಟಿಕ್ ಕವ ರ್ ಅನ್ನು ವೃದ್ಧೆಗೆ ನೀಡಿದ್ದಾನೆ. 100 ರೂಗಳ ಐದು ನೋಟು ಕೈಗೆ ನೀಡಿ ದೇವಾಲಯಕ್ಕೆ ಕಾಣಿಕೆ ಅರ್ಪಿಸಿ ಎಂದ ಬಳಿಕ, 100 ರೂ ನ ಒಂದು ನೋಟನ್ನು ಮಹಿಳೆಯ ಕೈಗೆ ಸುತ್ತುತ್ತಿದ್ದಂತೆ ಮಹಿಳೆ ಬಳೆ ಬಿಚ್ಚಿ ಕೊಟ್ಟಿದ್ದಾರೆ.
ಇವರ ಜೊತೆಯಲ್ಲಿ ಪತಿ ಐತಪ್ಪ ಕೂಡ ಇದ್ದರು ಒಂದು ಹಂತದಲ್ಲಿ ಬಳೆ ಬಿಚ್ಚಿಕೊಟ್ಟ ಬಳಿಕ ಕುತ್ತಿಗೆಗೆ ಕೈ ಹಾಕುತ್ತಿದ್ದಂತೆ ಪತಿ ಐತಪ್ಪ ಅವರಿಗೆ‌ ಮೋಸದ ವಾಸನೆ‌ ಬಂದಿದೆ. ನಂತರ ಸರವನ್ನು ಕೊಡಬೇಡ ಎನ್ನುತ್ತಿದ್ದಂತೆ ಅಪರಿಚಿತ ಸ್ಥಳದಿಂದ
ಕಾಲ್ಕಿತ್ತಿದ್ದು, ಸುಧಾರಿಸಿಕೊಂಡು ನೋಡುವಷ್ಟರಲ್ಲಿ ಬಳೆಯೊಂದಿಗೆ ಅಪರಿಚಿತ ಮಾಯವಾಗಿದ್ದಾನೆ. ಬೈಕ್ಅನ್ನು ಮುಖ್ಯ ರಸ್ತೆಯಲ್ಲಿ ನಿಲ್ಲಿಸಿ ಬಂದಿದ್ದ ಅಪರಿಚಿತನೊಂದಿಗೆ ಮತ್ತೊಬ್ಬ ಇದ್ದ ಎನ್ನಲಾಗಿದ್ದು,
ಸ್ಥಳಕ್ಕೆ ಭೇಟಿ ನೀಡಿದ ಕುಶಾಲನಗರ ಪಟ್ಟಣ ಪೊಲೀಸರು ಪರಿಶೀಲನೆ ನಡೆಸಿ, ಖದೀಮರ ಬೆನ್ನಟ್ಟಿದ್ದಾರೆ.
ಪಟ್ಟಣದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಲಿದ್ದು, ಪೊಲೀಸರು ಇದರ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

andolanait

Recent Posts

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

2 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

2 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 hours ago

ಸಚಿವ ಡಾ.ಜಿ.ಪರಮೇಶ್ವರ್‌ ಬೆಟ್ಟಿಂಗ್‌ ಕೇಸ್‌ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…

2 hours ago

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…

2 hours ago

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

2 hours ago