ಜಿಲ್ಲೆಗಳು

ವೃದ್ಧೆಗೆ ವಂಚಿಸಿ ಚಿನ್ನಾಭರಣ ಕಳವು

ಕುಶಾಲನಗರ :  ಅಪರಿಚಿತ ವ್ಯಕ್ತಿಯೋರ್ವ ವೃದ್ಧೆಯನ್ನು ವಶೀಕರಣ ಮಾಡಿ ವೃದ್ಧೆಯ ಚಿನ್ನಾಭರಣ ಅಪಹರಿಸಿದ ಘಟನೆ ಕುಶಾಲನಗರದ ಜನತಾ ಕಾಲನಿಯಲ್ಲಿ ನಡೆದಿದೆ. ಜನತಾ ಕಾಲನಿ 1ನೇ ಕ್ರಾಸ್ ನಿವಾಸಿಯಾದ ಅಬಕಾರಿ
ಇಲಾಖೆಯ ನಿವೃತ್ತ ನೌಕರ ಐತಪ್ಪನವರವ ಪತ್ನಿ ದೇವಮ್ಮನವರ ಚಿನ್ನಾಭರಣ ಕಳವು‌‌ ಮಾಡಲಾಗಿದೆ. ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ, ದೇವಮ್ಮ‌ನವರನ್ನು ವಶೀಕರಿಸಿ ಚಿನ್ನಾಭರಣ ಕಳವು‌ ಮಾಡಲಾಗಿದೆ. ಮನೆ ಸಮೀಪದ ಗೌರಿ ಗಣೇಶ
ದೇವಾಲಯಕ್ಕೆ ಕಾಣಿಕೆ ನೀಡುವ ನೆಪದಲ್ಲಿ ಮನೆಯಂಗಳಕ್ಕೆ ಬಂದ ಅಪರಿಚಿತ ವ್ಯಕ್ತಿ, ಗಂಧದ ಕಡ್ಡಿ, ಬಿಸ್ಕತ್ ಪ್ಯಾಕ್, ಫೈವ್ ಸ್ಟಾರ್ ತುಂಬಿದ್ದ ಪ್ಲಾಸ್ಟಿಕ್ ಕವ ರ್ ಅನ್ನು ವೃದ್ಧೆಗೆ ನೀಡಿದ್ದಾನೆ. 100 ರೂಗಳ ಐದು ನೋಟು ಕೈಗೆ ನೀಡಿ ದೇವಾಲಯಕ್ಕೆ ಕಾಣಿಕೆ ಅರ್ಪಿಸಿ ಎಂದ ಬಳಿಕ, 100 ರೂ ನ ಒಂದು ನೋಟನ್ನು ಮಹಿಳೆಯ ಕೈಗೆ ಸುತ್ತುತ್ತಿದ್ದಂತೆ ಮಹಿಳೆ ಬಳೆ ಬಿಚ್ಚಿ ಕೊಟ್ಟಿದ್ದಾರೆ.
ಇವರ ಜೊತೆಯಲ್ಲಿ ಪತಿ ಐತಪ್ಪ ಕೂಡ ಇದ್ದರು ಒಂದು ಹಂತದಲ್ಲಿ ಬಳೆ ಬಿಚ್ಚಿಕೊಟ್ಟ ಬಳಿಕ ಕುತ್ತಿಗೆಗೆ ಕೈ ಹಾಕುತ್ತಿದ್ದಂತೆ ಪತಿ ಐತಪ್ಪ ಅವರಿಗೆ‌ ಮೋಸದ ವಾಸನೆ‌ ಬಂದಿದೆ. ನಂತರ ಸರವನ್ನು ಕೊಡಬೇಡ ಎನ್ನುತ್ತಿದ್ದಂತೆ ಅಪರಿಚಿತ ಸ್ಥಳದಿಂದ
ಕಾಲ್ಕಿತ್ತಿದ್ದು, ಸುಧಾರಿಸಿಕೊಂಡು ನೋಡುವಷ್ಟರಲ್ಲಿ ಬಳೆಯೊಂದಿಗೆ ಅಪರಿಚಿತ ಮಾಯವಾಗಿದ್ದಾನೆ. ಬೈಕ್ಅನ್ನು ಮುಖ್ಯ ರಸ್ತೆಯಲ್ಲಿ ನಿಲ್ಲಿಸಿ ಬಂದಿದ್ದ ಅಪರಿಚಿತನೊಂದಿಗೆ ಮತ್ತೊಬ್ಬ ಇದ್ದ ಎನ್ನಲಾಗಿದ್ದು,
ಸ್ಥಳಕ್ಕೆ ಭೇಟಿ ನೀಡಿದ ಕುಶಾಲನಗರ ಪಟ್ಟಣ ಪೊಲೀಸರು ಪರಿಶೀಲನೆ ನಡೆಸಿ, ಖದೀಮರ ಬೆನ್ನಟ್ಟಿದ್ದಾರೆ.
ಪಟ್ಟಣದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಲಿದ್ದು, ಪೊಲೀಸರು ಇದರ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago