ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಯುವ ದಸರಾ ಕಾರ್ಯಕ್ರಮದ ಪಟ್ಟಿಯನ್ನು ಯುವ ದಸರಾ ಉಪ ಸಮಿತಿ ಇಂದು ಬಿಡುಗಡೆ ಮಾಡಿದೆ.
ಯುವ ದಸರಾ ಕಾರ್ಯಕ್ರಮಗಳು ಸೆ. 28ರಿಂದ ಅಕ್ಟೋಬರ್ 3ರ ವರೆಗೆ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್ ನಾಗೇಂದ್ರ ರವರು ವಹಿಸಲಿದ್ದಾರೆ.
ಯುವ ದಸರಾ ಕಾರ್ಯಕ್ರಮದ ವಿವರ :
28-09-2022 : ಮೊದಲ ದಿನ ಬುಧವಾರ
ಅಪ್ಪು ನಮನ –7.00-10.00pm
ಖ್ಯಾತ ಹಿನ್ನೆಲೆ ಗಾಯಕರು ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್, ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್, ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ಕುನಾಲ್ ಗಾಂಜಾವಾಲಾ ರವರಿಂದ.
29-09-2022 : ಎರಡನೇ ದಿನ ಗುರುವಾರ
ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ – 6.00-06.30pm
ಸ್ಥಳೀಯ ನೃತ್ಯ ತಂಡದಿಂದ ನೃತ್ಯ ಪ್ರದರ್ಶನ -6.30-07 pm
ಪವನ್ ಡ್ಯಾನ್ಸ್ ಹಾಗೂ ಇತರರಿಂದ ನೃತ್ಯ ರೂಪಕ -7.00-8.00pm
ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಕನ್ನಿಕ ಕಪೂರ್ ಅವರಿಂದ ಸಂಗೀತ ರಸ ಸಂಜೆ 8.00-10.00
30-09-2022 : ಮೂರನೇ ದಿನ ಶುಕ್ರವಾರ
ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ 6.00-06.30pm
ಸ್ಥಳೀಯ ಕಲಾವಿದರ ಕಾರ್ಯಕ್ರಮ 6.30-7.00pm
ಲೇಸರ್ ಆಕ್ಟ್ ಮತ್ತು ಸಿಗ್ನೇಚರ್ ಗ್ರೂಪ್ ತಂಡದಿಂದ ನೃತ್ಯ ರೂಪಕ 7.00-07.30pm
ಸ್ಯಾಂಡಲ್ ವುಡ್ ನೈಟ್ 07.30-10.00pm
01-10-2022 ನಾಲ್ಕನೇ ದಿನ ಶನಿವಾರ
ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ 06.00-06.30pm
ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ಹನಿ ಸಿಂಗ್ ಮತ್ತು ಖ್ಯಾತ ಚಲನ ಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತಾ ಮಲ್ನಾಡ್ ಅವರಿಂದ ಸಂಗೀತ ರಸಮಂಜರಿ. 06.30-10.00pm
02-10-2022 ಐದನೇ ದಿನ ಭಾನುವಾರ :
ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ 06.00-06.30pm
ಖ್ಯಾತ ಚಲನ ಚಿತ್ರ ನಟರದ ವಾರ್ಷಿಕ ಪೊನ್ನಚ್ಚ ಮತ್ತು ವಿಜಯ ರಾಘವೇಂದ್ರ ಅವರಿಂದ ಕನ್ನಡ ಸ್ಟಾರ್ ನೈಟ್ 06.30-7-30pm
ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಮಂಗ್ಲಿ ರವರಿಂದ ಸಂಗೀತ ರಸಮಂಜರಿ 07.30-8.30pm
ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ಅಮಿತ್ ತ್ರಿವೇದಿ ಅವರಿಂದ ಸಂಗೀತ ರಸಮಂಜರಿ 08. 30-10.00
03-10-2022 ಸೋಮವಾರ ಆರನೇ ದಿನ :
ಯುವ ಸಂಭ್ರಮ ವಿಜೇತರಿಂದ ನೃತ್ಯ ಪ್ರದರ್ಶನ 6.00-6.30pm.
ಸುಪ್ರಿಯ ರಾಮ್ ಮತ್ತು ಮಹಿಳಾ ಬ್ಯಾಂಡ್ ತಂಡದಿಂದ 06.30-7=30pm
ಫ್ಯಾಶನ್ ಶೋ 7.30-8.00 pm
ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಸುನಿಧಿ ಚೌಹಾನ್ ರವರಿಂದ ಸಂಗೀತ ರಸಮಂಜರಿ 8.00-10.00pm
ಕಾರ್ಯಕ್ರಮಗಳು ನಡೆಯಲಿವೆ.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…