ಜಿಲ್ಲೆಗಳು

ಬಿಳಿಗಿರಿರಂಗನಬೆಟ್ಟ: ಇನ್ಮುಂದೆ ಪ್ರತಿ ವಾಹನಕ್ಕೂ ಪ್ರತ್ಯೇಕ ಪಾಸ್;‌ ನೀವೂ ಇದನ್ನು ಪಾಲಿಸಲೇಬೇಕು

ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ ವಲಯ ಎಂದೂ ಸಹ ಘೋಷಿಸಲಾಗಿದೆ.

ಬಿಳಿರಂಗನಬೆಟ್ಟದಲ್ಲಿ ಹುಲಿ ಮಾತ್ರವಲ್ಲದೇ ಆನೆ, ಜಿಂಕೆ ಮುಂತಾದ ವನ್ಯಜೀವಿಗಳ ಹಿಂಡೇ ಇದ್ದು, ದೇವಸ್ಥಾನಕ್ಕೆ ತೆರಳುವ ಹಾದಿಯಲ್ಲಿ ಈ ಪ್ರಾಣಿಗಳು ಕಣ್ಣಿಗೆ ಬೀಳಲಿದ್ದು, ಪುಣ್ಯಕ್ಷೇತ್ರದ ಜತೆ ಒಂದೊಳ್ಳೆ ಫಾರೆಸ್ಟ್‌ ಜೋನ್‌ ಸಹ ಇದಾಗಿದೆ. ಇನ್ನು ಈ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಯನ್ನು ತಪ್ಪಿಸಲು ಇದೀಗ ಅರಣ್ಯ ಅಧಿಕಾರಿಗಳು ಹೊಸ ಯೋಜನೆಯನ್ನು ಹೆಣೆದಿದ್ದಾರೆ.

ಹೌದು, ಬಿಳಿರಂಗನಬೆಟ್ಟ ಪ್ರವೇಶಿಸುವಾಗ ಆರಂಭದಲ್ಲಿ ಸಿಗುವ ಚೆಕ್‌ಪೋಸ್ಟ್‌ನಲ್ಲಿ ಇನ್ನುಮುಂದೆ ಪ್ರತಿ ವಾಹನಕ್ಕೂ ಪ್ರತ್ಯೇಕ ಪಾಸ್‌ ಅನ್ನು ನೀಡಲಾಗಲಿದ್ದು, ಅದೇ ಪಾಸನ್ನು ದೇವಸ್ಥಾನದ ಬಳಿ ಸಿಗುವ ಎರಡನೇ ಚೆಕ್‌ ಪೋಸ್ಟ್‌ನಲ್ಲಿ ಸಹ ಪ್ರಯಾಣಿಕರು ಎಂಟ್ರಿ ಮಾಡಿಸಬೇಕಿದೆ. ಇದರಿಂದ ಎಷ್ಟು ಜನ ಒಳಗೆ ಹೋಗಿದ್ದಾರೆ ಹಾಗೂ ಎಷ್ಟು ಜನ ಹೊರಬಂದಿದ್ದಾರೆ ಎಂಬ ಸ್ಪಷ್ಟತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಲಭಿಸಲಿದ್ದು, ಮೃಗಬೇಟೆಗಾರನ್ನು ತಡೆಯಲು ಈ ಪ್ಲಾನ್‌ ಮಾಡಲಾಗಿದೆ.

andolana

Recent Posts

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

1 min ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

13 mins ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

1 hour ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

2 hours ago

ಗುಡುಮಾದನಹಳ್ಳಿ ರೈತರ ಪರ ನಿಂತ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…

2 hours ago

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ…

2 hours ago