ಜಿಲ್ಲೆಗಳು

ಬಿಳಿಗಿರಿರಂಗನಬೆಟ್ಟ: ಇನ್ಮುಂದೆ ಪ್ರತಿ ವಾಹನಕ್ಕೂ ಪ್ರತ್ಯೇಕ ಪಾಸ್;‌ ನೀವೂ ಇದನ್ನು ಪಾಲಿಸಲೇಬೇಕು

ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ ವಲಯ ಎಂದೂ ಸಹ ಘೋಷಿಸಲಾಗಿದೆ.

ಬಿಳಿರಂಗನಬೆಟ್ಟದಲ್ಲಿ ಹುಲಿ ಮಾತ್ರವಲ್ಲದೇ ಆನೆ, ಜಿಂಕೆ ಮುಂತಾದ ವನ್ಯಜೀವಿಗಳ ಹಿಂಡೇ ಇದ್ದು, ದೇವಸ್ಥಾನಕ್ಕೆ ತೆರಳುವ ಹಾದಿಯಲ್ಲಿ ಈ ಪ್ರಾಣಿಗಳು ಕಣ್ಣಿಗೆ ಬೀಳಲಿದ್ದು, ಪುಣ್ಯಕ್ಷೇತ್ರದ ಜತೆ ಒಂದೊಳ್ಳೆ ಫಾರೆಸ್ಟ್‌ ಜೋನ್‌ ಸಹ ಇದಾಗಿದೆ. ಇನ್ನು ಈ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಯನ್ನು ತಪ್ಪಿಸಲು ಇದೀಗ ಅರಣ್ಯ ಅಧಿಕಾರಿಗಳು ಹೊಸ ಯೋಜನೆಯನ್ನು ಹೆಣೆದಿದ್ದಾರೆ.

ಹೌದು, ಬಿಳಿರಂಗನಬೆಟ್ಟ ಪ್ರವೇಶಿಸುವಾಗ ಆರಂಭದಲ್ಲಿ ಸಿಗುವ ಚೆಕ್‌ಪೋಸ್ಟ್‌ನಲ್ಲಿ ಇನ್ನುಮುಂದೆ ಪ್ರತಿ ವಾಹನಕ್ಕೂ ಪ್ರತ್ಯೇಕ ಪಾಸ್‌ ಅನ್ನು ನೀಡಲಾಗಲಿದ್ದು, ಅದೇ ಪಾಸನ್ನು ದೇವಸ್ಥಾನದ ಬಳಿ ಸಿಗುವ ಎರಡನೇ ಚೆಕ್‌ ಪೋಸ್ಟ್‌ನಲ್ಲಿ ಸಹ ಪ್ರಯಾಣಿಕರು ಎಂಟ್ರಿ ಮಾಡಿಸಬೇಕಿದೆ. ಇದರಿಂದ ಎಷ್ಟು ಜನ ಒಳಗೆ ಹೋಗಿದ್ದಾರೆ ಹಾಗೂ ಎಷ್ಟು ಜನ ಹೊರಬಂದಿದ್ದಾರೆ ಎಂಬ ಸ್ಪಷ್ಟತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಲಭಿಸಲಿದ್ದು, ಮೃಗಬೇಟೆಗಾರನ್ನು ತಡೆಯಲು ಈ ಪ್ಲಾನ್‌ ಮಾಡಲಾಗಿದೆ.

andolana

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

2 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

18 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

35 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

48 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago