ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ ವಲಯ ಎಂದೂ ಸಹ ಘೋಷಿಸಲಾಗಿದೆ.
ಬಿಳಿರಂಗನಬೆಟ್ಟದಲ್ಲಿ ಹುಲಿ ಮಾತ್ರವಲ್ಲದೇ ಆನೆ, ಜಿಂಕೆ ಮುಂತಾದ ವನ್ಯಜೀವಿಗಳ ಹಿಂಡೇ ಇದ್ದು, ದೇವಸ್ಥಾನಕ್ಕೆ ತೆರಳುವ ಹಾದಿಯಲ್ಲಿ ಈ ಪ್ರಾಣಿಗಳು ಕಣ್ಣಿಗೆ ಬೀಳಲಿದ್ದು, ಪುಣ್ಯಕ್ಷೇತ್ರದ ಜತೆ ಒಂದೊಳ್ಳೆ ಫಾರೆಸ್ಟ್ ಜೋನ್ ಸಹ ಇದಾಗಿದೆ. ಇನ್ನು ಈ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಯನ್ನು ತಪ್ಪಿಸಲು ಇದೀಗ ಅರಣ್ಯ ಅಧಿಕಾರಿಗಳು ಹೊಸ ಯೋಜನೆಯನ್ನು ಹೆಣೆದಿದ್ದಾರೆ.
ಹೌದು, ಬಿಳಿರಂಗನಬೆಟ್ಟ ಪ್ರವೇಶಿಸುವಾಗ ಆರಂಭದಲ್ಲಿ ಸಿಗುವ ಚೆಕ್ಪೋಸ್ಟ್ನಲ್ಲಿ ಇನ್ನುಮುಂದೆ ಪ್ರತಿ ವಾಹನಕ್ಕೂ ಪ್ರತ್ಯೇಕ ಪಾಸ್ ಅನ್ನು ನೀಡಲಾಗಲಿದ್ದು, ಅದೇ ಪಾಸನ್ನು ದೇವಸ್ಥಾನದ ಬಳಿ ಸಿಗುವ ಎರಡನೇ ಚೆಕ್ ಪೋಸ್ಟ್ನಲ್ಲಿ ಸಹ ಪ್ರಯಾಣಿಕರು ಎಂಟ್ರಿ ಮಾಡಿಸಬೇಕಿದೆ. ಇದರಿಂದ ಎಷ್ಟು ಜನ ಒಳಗೆ ಹೋಗಿದ್ದಾರೆ ಹಾಗೂ ಎಷ್ಟು ಜನ ಹೊರಬಂದಿದ್ದಾರೆ ಎಂಬ ಸ್ಪಷ್ಟತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಲಭಿಸಲಿದ್ದು, ಮೃಗಬೇಟೆಗಾರನ್ನು ತಡೆಯಲು ಈ ಪ್ಲಾನ್ ಮಾಡಲಾಗಿದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…