ಜಿಲ್ಲೆಗಳು

ಬಿಳಿಗಿರಿರಂಗನಬೆಟ್ಟ: ಇನ್ಮುಂದೆ ಪ್ರತಿ ವಾಹನಕ್ಕೂ ಪ್ರತ್ಯೇಕ ಪಾಸ್;‌ ನೀವೂ ಇದನ್ನು ಪಾಲಿಸಲೇಬೇಕು

ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ ವಲಯ ಎಂದೂ ಸಹ ಘೋಷಿಸಲಾಗಿದೆ.

ಬಿಳಿರಂಗನಬೆಟ್ಟದಲ್ಲಿ ಹುಲಿ ಮಾತ್ರವಲ್ಲದೇ ಆನೆ, ಜಿಂಕೆ ಮುಂತಾದ ವನ್ಯಜೀವಿಗಳ ಹಿಂಡೇ ಇದ್ದು, ದೇವಸ್ಥಾನಕ್ಕೆ ತೆರಳುವ ಹಾದಿಯಲ್ಲಿ ಈ ಪ್ರಾಣಿಗಳು ಕಣ್ಣಿಗೆ ಬೀಳಲಿದ್ದು, ಪುಣ್ಯಕ್ಷೇತ್ರದ ಜತೆ ಒಂದೊಳ್ಳೆ ಫಾರೆಸ್ಟ್‌ ಜೋನ್‌ ಸಹ ಇದಾಗಿದೆ. ಇನ್ನು ಈ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಯನ್ನು ತಪ್ಪಿಸಲು ಇದೀಗ ಅರಣ್ಯ ಅಧಿಕಾರಿಗಳು ಹೊಸ ಯೋಜನೆಯನ್ನು ಹೆಣೆದಿದ್ದಾರೆ.

ಹೌದು, ಬಿಳಿರಂಗನಬೆಟ್ಟ ಪ್ರವೇಶಿಸುವಾಗ ಆರಂಭದಲ್ಲಿ ಸಿಗುವ ಚೆಕ್‌ಪೋಸ್ಟ್‌ನಲ್ಲಿ ಇನ್ನುಮುಂದೆ ಪ್ರತಿ ವಾಹನಕ್ಕೂ ಪ್ರತ್ಯೇಕ ಪಾಸ್‌ ಅನ್ನು ನೀಡಲಾಗಲಿದ್ದು, ಅದೇ ಪಾಸನ್ನು ದೇವಸ್ಥಾನದ ಬಳಿ ಸಿಗುವ ಎರಡನೇ ಚೆಕ್‌ ಪೋಸ್ಟ್‌ನಲ್ಲಿ ಸಹ ಪ್ರಯಾಣಿಕರು ಎಂಟ್ರಿ ಮಾಡಿಸಬೇಕಿದೆ. ಇದರಿಂದ ಎಷ್ಟು ಜನ ಒಳಗೆ ಹೋಗಿದ್ದಾರೆ ಹಾಗೂ ಎಷ್ಟು ಜನ ಹೊರಬಂದಿದ್ದಾರೆ ಎಂಬ ಸ್ಪಷ್ಟತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಲಭಿಸಲಿದ್ದು, ಮೃಗಬೇಟೆಗಾರನ್ನು ತಡೆಯಲು ಈ ಪ್ಲಾನ್‌ ಮಾಡಲಾಗಿದೆ.

andolana

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

3 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

3 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

3 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

4 hours ago