ಜಿಲ್ಲೆಗಳು

ಶಾಗ್ಯ ಗ್ರಾಮ : ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಭೂಮಿ ಪೂಜೆ

ಹನೂರು : ತಾಲೂಕಿನ ಶಾಗ್ಯ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಆರ್ ನರೇಂದ್ರ ಭೂಮಿ ಪೂಜೆ ಸಲ್ಲಿಸಿದರು.

ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿ 25 ಕೋಟಿ ಅನುದಾನದಲ್ಲಿ ಹನೂರು ವಿಧಾನಸಭಾ ಕ್ಷೇತ್ರಾದ್ಯಂತ ಅಭಿವೃದ್ಧಿ ಮಾಡಲಾಗುತ್ತಿದೆ. ಬಹು ದಿನಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಬಂಡಳ್ಳಿ ತೆಳ್ಳನೂರು ರಸ್ತೆ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಕಾಮಗಾರಿ ಪ್ರಾರಂಭವಾಗಬೇಕಿದೆ.

ಈ ವಿಶೇಷ ಅನುದಾನದಲ್ಲಿ ಸಾಮಾನ್ಯ ವರ್ಗದವರ ಬಡಾವಣೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಲೋಕನಹಳ್ಳಿ, ಪಾಳ್ಯ, ಸತ್ತೆಗಾಲ, ಬಂಡಳ್ಳಿ, ಕೌದಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಈಗಾಗಲೇ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಶಾಗ್ಯ ಗ್ರಾಮದ ವೀರಶೈವ ಹಾಗೂ ನಾಯಕರ ಬಡಾವಣೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 18 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಚಾಲನೆ ನೀಡಿರುವ ಕಾಮಗಾರಿಗಳು ಇನ್ನು ಎರಡು ತಿಂಗಳುಗಳಲ್ಲಿ ಮುಗಿಯಲಿದೆ ಎಂದು ತಿಳಿಸಿದರು.

ಶಾಗ್ಯ ಗ್ರಾಮಕ್ಕೆ ದಿ ರಾಜುಗೌಡರು ಶಾಸಕರಾಗಿದ್ದ ಸಂದರ್ಭದಲ್ಲಿ ಎಲ್ಲಾ ವರ್ಗದವರಿಗೆ ನಿವೇಶನ ಕೊಡಿಸಿ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಇದೇ ನಿಟ್ಟಿನಲ್ಲಿ ನಾನು ಸಹ ಈ ಹೊಸ ಬಡಾವಣೆ ಸೇರಿದಂತೆ ಇನ್ನಿತರ ಬಡಾವಣೆಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಈ ಬಾರಿಯು ನೀವು ನನಗೆ ಆಶೀರ್ವದಿಸಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ಉಳಿದ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಅದ್ದೂರಿ ಮೆರವಣಿಗೆ: ಶಾಗ್ಯ ಗ್ರಾಮಕ್ಕೆ ಆಗಮಿಸಿದ ಶಾಸಕ ಆರ್ ನರೇಂದ್ರ ರವರನ್ನು ವೀರಶೈವ, ನಾಯಕ, ಆದಿ ಜಾಂಬವ ಸಮಾಜದ ಯುವಕ ಮುಖಂಡರುಗಳು ಅದ್ದೂರಿ ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ ಶಾಗ್ಯ ಗ್ರಾಮದಲ್ಲಿರುವ ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಗಳ ಪುತ್ತಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ಶಾಗ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆರೋಗ್ಯಮ್ಮ, ಸದಸ್ಯರಾದ ಜಾನ್ ಪೌಲ್, ಶರತ್, ತಾಪಂ ಮಾಜಿ ಸದಸ್ಯ ಜವಾದ್ ಅಹಮದ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್, ಮುಖಂಡರುಗಳಾದ ಶಾಗ್ಯ ಬಸವರಾಜು, ಉದ್ದನೂರು ಸಿದ್ದರಾಜು, ಮಲ್ಲೇಶ್, ನಂಜುಂಡ ನಾಯಕ, ಸುಂದರ್, ವಿನಯ್, ಕೆಂಪರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

4 mins ago

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

24 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

24 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

24 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

24 hours ago