ಮೈಸೂರು: ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳ ಆಡಳಿತ ಕುಲಸಚಿವರನ್ನಾಗಿ ಕೆಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದ್ದು, ಮೈಸೂರು ವಿವಿ ಕುಲಸಚಿವರಾಗಿ ವಿ.ಆರ್.ಶೈಲಜಾ ಅವರನ್ನು ನೇಮಿಸಲಾಗಿದ್ದು, ಅವರು ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನವರಾದ ಶೈಲಜಾ ಅವರು ತಿ.ನರಸೀಪುರ ತಹಸಿಲ್ದಾರ್ ಆಗಿ, ಪಾಂಡವಪುರ ಉಪವಿಭಾಗಾಧಿಕಾರಿಯಾಗಿ, ಮೈಸೂರು ನಗರಪಾಲಿಕೆ ವಲಯ ಸಹಾಯಕ ಆಯುಕ್ತರಾಗಿ, ರಾಮನಗರ ಜಿಲ್ಲೆಯ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿಯಾಗಿ, ಮಂಡ್ಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.





