ಜಿಲ್ಲೆಗಳು

ಶಾರಿಖ್ ಮೂಲ ಜಾಲಾಡುತ್ತಿರುವ ಪೊಲೀಸರು

ಮೈಸೂರು: ಮಂಗಳೂರು ಕುಕ್ಕರ್ ಸೋಟದ ಪ್ರಮುಖ ಆರೋಪಿ ಶಾರಿಖ್ ಮೈಸೂರಿನಲ್ಲಿದ್ದಾಗ ರೂಪಿಸಿದ ಯೋಜನೆಗಳು, ಇಲ್ಲಿಂದ ಪ್ರಯಾಣ ಮಾಡಿದ ವಿವರಗಳನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದು, ಹಲವಾರು ಕುತೂಹಲಕಾರಿ ಅಂಶಗಳು ಬಯಲಾಗಿವೆ.

ಶಾರಿಖ್ ನಗರದಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಯಾರ್ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬ ಬಗ್ಗೆ ಎರಡು ದಿನಗಳ ಮಾಹಿತಿ ಕಲೆ ಹಾಕಿರುವ ಮಂಗಳೂರು ಪೊಲೀಸರು, ಈಗ ಆತನ ಪ್ರಯಾಣದ ಹಿಸ್ಟರಿಯನ್ನು ಗುಪ್ತವಾಗಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಶಾರಿಖ್ ಯಾವ ವಾಹನದಲ್ಲಿ ಯಾವ್ಯಾವ ಊರುಗಳಿಗೆ ಪ್ರಯಾಣ ಮಾಡಿದ್ದಾನೆ. ಹೀಗೆ ಹೋದ ಸ್ಥಳಗಳಲ್ಲಿ ಯಾರನ್ನು ಭೇಟಿ ಮಾಡಿದ್ದಾನೆ ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.ಆತ ಒಂದು ಬಾರಿ ಬಸ್ಸಿನಲ್ಲಿ ಮತ್ತೊಂದು ಬಾರಿ ರೈಲಿನಲ್ಲಿ ಮಂಗಳೂರಿಗೆ ಪ್ರಯಾಣ ಮಾಡಿದ್ದಾನೆ ಎನ್ನುವುದು ಗೊತ್ತಾಗಿದೆ. ಈ ನಿಟ್ಟಿನಲ್ಲಿ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲನೆ ನಡೆಸಿ ದಾಖಲೆ ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ.

ಶಾರಿಖ್ ಮನೆಗೆ ಯಾವಾಗ ಬರುತ್ತಾನೆ ಎಂಬುದೇ ಅಕ್ಕಪಕ್ಕದವರಿಗೆ ಗೊತ್ತಾಗುತ್ತಿರಲಿಲ್ಲ ಎಂಬ ಅಂಶವು ತಿಳಿದು ಬಂದಿದೆ. ಈ ರಸ್ತೆಯಲ್ಲಿ ಇರುವ ಬಹುತೇಕ ನಿವಾಸಿಗಳಿಗೆ ಈ ಪ್ರಕರಣದಿಂದ ಅವನ ಚಹರೆ ಮತ್ತು ಇಲ್ಲೆಯಿದ್ದ ಎಂಬುದು ಅರಿವಿಗೆ ಬಂದಿದೆ. ಇನ್ನು ಮನೆಯಲ್ಲಿಯೇ ಇದ್ದರೂ ಹೆಚ್ಚು ಹೊರೆಗೆ ಬರುತ್ತಿರಲಿಲ್ಲ. ಸ್ನೇಹಿತರೂ ಬಂದರೂ ಗೊತ್ತಾಗುತ್ತಿರಲಿಲ್ಲ. ಆತ ಊಟ ಮತ್ತು ತಿಂಡಿಯನ್ನು ಹೊರಗೆ ಮಾಡುತ್ತಿದ್ದ . ಆದರೂ, ಮನೆಯಲ್ಲಿ ಆಗಾಗ ಏನನ್ನೋ ಕತ್ತರಿಸುವ ರೀತಿ, ಮಿಕ್ಸಿ ಆನ್ ಆದಾಗ ಬರುವ ರೀತಿ ಶಬ್ಧಗಳು ಬರುತ್ತಿದ್ದವು. ಇದರಿಂದ ಸ್ಪೋಟಕ್ಕೆ ಇಲ್ಲಿಯೇ ತಯಾರಿ ಮಾಡುತ್ತಿರಬಹುದು ಎನ್ನುವ ಅನುಮಾನವೂ ಪೊಲೀಸರನ್ನು ಕಾಡುತ್ತಿದೆ.

ಮನೆಗೆ ಪೊಲೀಸ್ ಕಾವಲು: ತನಿಖೆಯ ಹಿನ್ನೆಲೆಯಲ್ಲಿ ಆತ ಇದ್ದ ಬಾಡಿಗೆ ಮನೆಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಬೀಗ ಜಡಿದು ಪಾಳಿ ಲೆಕ್ಕದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಮನೆಯಿರುವ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ರಾತ್ರಿ ವೇಳೆ ಈ ರಸ್ತೆಯಲ್ಲಿ ಬೀಟ್ ವ್ಯವಸ್ಥೆ ಹೆಚ್ಚಿಸಲಾಗಿದೆ.

andolanait

Recent Posts

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

3 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

4 hours ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

4 hours ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

4 hours ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

5 hours ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

5 hours ago