ಜಿಲ್ಲೆಗಳು

ಶಾರಿಖ್ ಮೂಲ ಜಾಲಾಡುತ್ತಿರುವ ಪೊಲೀಸರು

ಮೈಸೂರು: ಮಂಗಳೂರು ಕುಕ್ಕರ್ ಸೋಟದ ಪ್ರಮುಖ ಆರೋಪಿ ಶಾರಿಖ್ ಮೈಸೂರಿನಲ್ಲಿದ್ದಾಗ ರೂಪಿಸಿದ ಯೋಜನೆಗಳು, ಇಲ್ಲಿಂದ ಪ್ರಯಾಣ ಮಾಡಿದ ವಿವರಗಳನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದು, ಹಲವಾರು ಕುತೂಹಲಕಾರಿ ಅಂಶಗಳು ಬಯಲಾಗಿವೆ.

ಶಾರಿಖ್ ನಗರದಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಯಾರ್ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬ ಬಗ್ಗೆ ಎರಡು ದಿನಗಳ ಮಾಹಿತಿ ಕಲೆ ಹಾಕಿರುವ ಮಂಗಳೂರು ಪೊಲೀಸರು, ಈಗ ಆತನ ಪ್ರಯಾಣದ ಹಿಸ್ಟರಿಯನ್ನು ಗುಪ್ತವಾಗಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಶಾರಿಖ್ ಯಾವ ವಾಹನದಲ್ಲಿ ಯಾವ್ಯಾವ ಊರುಗಳಿಗೆ ಪ್ರಯಾಣ ಮಾಡಿದ್ದಾನೆ. ಹೀಗೆ ಹೋದ ಸ್ಥಳಗಳಲ್ಲಿ ಯಾರನ್ನು ಭೇಟಿ ಮಾಡಿದ್ದಾನೆ ಎಂಬ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.ಆತ ಒಂದು ಬಾರಿ ಬಸ್ಸಿನಲ್ಲಿ ಮತ್ತೊಂದು ಬಾರಿ ರೈಲಿನಲ್ಲಿ ಮಂಗಳೂರಿಗೆ ಪ್ರಯಾಣ ಮಾಡಿದ್ದಾನೆ ಎನ್ನುವುದು ಗೊತ್ತಾಗಿದೆ. ಈ ನಿಟ್ಟಿನಲ್ಲಿ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲನೆ ನಡೆಸಿ ದಾಖಲೆ ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ.

ಶಾರಿಖ್ ಮನೆಗೆ ಯಾವಾಗ ಬರುತ್ತಾನೆ ಎಂಬುದೇ ಅಕ್ಕಪಕ್ಕದವರಿಗೆ ಗೊತ್ತಾಗುತ್ತಿರಲಿಲ್ಲ ಎಂಬ ಅಂಶವು ತಿಳಿದು ಬಂದಿದೆ. ಈ ರಸ್ತೆಯಲ್ಲಿ ಇರುವ ಬಹುತೇಕ ನಿವಾಸಿಗಳಿಗೆ ಈ ಪ್ರಕರಣದಿಂದ ಅವನ ಚಹರೆ ಮತ್ತು ಇಲ್ಲೆಯಿದ್ದ ಎಂಬುದು ಅರಿವಿಗೆ ಬಂದಿದೆ. ಇನ್ನು ಮನೆಯಲ್ಲಿಯೇ ಇದ್ದರೂ ಹೆಚ್ಚು ಹೊರೆಗೆ ಬರುತ್ತಿರಲಿಲ್ಲ. ಸ್ನೇಹಿತರೂ ಬಂದರೂ ಗೊತ್ತಾಗುತ್ತಿರಲಿಲ್ಲ. ಆತ ಊಟ ಮತ್ತು ತಿಂಡಿಯನ್ನು ಹೊರಗೆ ಮಾಡುತ್ತಿದ್ದ . ಆದರೂ, ಮನೆಯಲ್ಲಿ ಆಗಾಗ ಏನನ್ನೋ ಕತ್ತರಿಸುವ ರೀತಿ, ಮಿಕ್ಸಿ ಆನ್ ಆದಾಗ ಬರುವ ರೀತಿ ಶಬ್ಧಗಳು ಬರುತ್ತಿದ್ದವು. ಇದರಿಂದ ಸ್ಪೋಟಕ್ಕೆ ಇಲ್ಲಿಯೇ ತಯಾರಿ ಮಾಡುತ್ತಿರಬಹುದು ಎನ್ನುವ ಅನುಮಾನವೂ ಪೊಲೀಸರನ್ನು ಕಾಡುತ್ತಿದೆ.

ಮನೆಗೆ ಪೊಲೀಸ್ ಕಾವಲು: ತನಿಖೆಯ ಹಿನ್ನೆಲೆಯಲ್ಲಿ ಆತ ಇದ್ದ ಬಾಡಿಗೆ ಮನೆಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಬೀಗ ಜಡಿದು ಪಾಳಿ ಲೆಕ್ಕದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಮನೆಯಿರುವ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ರಾತ್ರಿ ವೇಳೆ ಈ ರಸ್ತೆಯಲ್ಲಿ ಬೀಟ್ ವ್ಯವಸ್ಥೆ ಹೆಚ್ಚಿಸಲಾಗಿದೆ.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago