ಮೈಸೂರು: ಕುರಿ ಹಾಗೂ ಮೇಕೆಗಳನ್ನು ಇನ್ನು ನೀವು ಮಾರುಕಟ್ಟೆಗೆ ಹೋಗಿಯೇ ಖರೀದಿಸಬೇಕಿಲ್ಲ. ಇದಕ್ಕಾಗಿ ಆನ್ಲೈನ್ ಸೇವೆಗೆ ಅಣಿಗೊಳಿಸಲಾಗುತ್ತಿದ್ದು, ಮನೆಯಲ್ಲಿಯೇ ಕುಳಿತು ಸೂಕ್ತ ಮಾಹಿತಿ ಪಡೆದು ಖರೀದಿಸುವ ಡಿಜಿಟಲ್ ಮಾರುಕಟ್ಟೆ ವ್ಯವಸ್ಥೆ ಮೈಸೂರಿನಲ್ಲಿ ಜಾರಿಗೆ ಬರುತ್ತಿದೆ.
ಕುರಿ ಹಾಗೂ ಮೇಕೆಗಳ ಮಾರುಕಟ್ಟೆ ವ್ಯವಸ್ಥೆ ಡಿಜಿಟಲೀಕರಣಗೊಳಿಸಲಾಗಿದ್ದು, ಮೈಸೂರು ಸೇರಿದಂತೆ ರಾಜ್ಯದ ೧೦ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದು ಜನ ಬಳಕೆಗೆ ಸಿಗಲಿದೆ. ಇದಕ್ಕಾಗಿಯೇ ಇಲಾಖೆ ಹಾಗೂ ನಿಗಮದಿಂದ ತಂತ್ರಜ್ಞಾನದ ಕುರಿತು ತರಬೇತಿಯನ್ನು ಆಗಸ್ಟ್ ೧೦ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಧನ್ವಂತ್ರಿ ರಸ್ತೆಯಲ್ಲಿರುವ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ ೧೦ಕ್ಕೆ ನಡೆಯುವ ಕಾರ್ಯಾಗಾರವನ್ನು ಇಲಾಖೆ ಆಯುಕ್ತ ಡಾ.ಬಸವರಾಜೇಂದ್ರ ಉದ್ಘಾಟಿಸುವರು. ಇಲಾಖೆ ನಿರ್ದೇಶಕ ಡಾ. ಮಂಜುನಾಥ ಪಾಳೇಗಾರ್, ಅಪರ ನಿರ್ದೇಶಕ ಡಾ.ಪ್ರಸಾದ್ ಮೂರ್ತಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಪಂಪಾಪತಿ, ಜಂಟಿ ನಿರ್ದೇಶಕರಾದ ಡಾ.ವೀರಭದ್ರಯ್ಯ, ಎನ್ ಇಎಂಎಲ್ ಸಂಸ್ಥೆಯ ಹರ್ಷ ಹಾಜರಿರುವರು. ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಉಪನಿರ್ದೇಶಕರು, ಮುಖ್ಯ ಪಶು ವೈದ್ಯಾಧಿಕಾರಿಗಳು, ನಿಗಮದ ಸಹಾಯಕ ನಿರ್ದೇಶಕರು, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ರೈತ ಉತ್ಪಾದಕ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನಿರ್ದೇಶಕರು ಪಾಲ್ಗೊಳ್ಳುವರು ಎಂದು ನಿಗಮದ ಮೈಸೂರು ಸಹಾಯಕ ನಿರ್ದೇಶಕ ಡಾ.ಮ.ಪು.ಪೂರ್ಣಾನಂದ ತಿಳಿಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…