ಮೈಸೂರು: ಕುರಿ ಹಾಗೂ ಮೇಕೆಗಳನ್ನು ಇನ್ನು ನೀವು ಮಾರುಕಟ್ಟೆಗೆ ಹೋಗಿಯೇ ಖರೀದಿಸಬೇಕಿಲ್ಲ. ಇದಕ್ಕಾಗಿ ಆನ್ಲೈನ್ ಸೇವೆಗೆ ಅಣಿಗೊಳಿಸಲಾಗುತ್ತಿದ್ದು, ಮನೆಯಲ್ಲಿಯೇ ಕುಳಿತು ಸೂಕ್ತ ಮಾಹಿತಿ ಪಡೆದು ಖರೀದಿಸುವ ಡಿಜಿಟಲ್ ಮಾರುಕಟ್ಟೆ ವ್ಯವಸ್ಥೆ ಮೈಸೂರಿನಲ್ಲಿ ಜಾರಿಗೆ ಬರುತ್ತಿದೆ.
ಕುರಿ ಹಾಗೂ ಮೇಕೆಗಳ ಮಾರುಕಟ್ಟೆ ವ್ಯವಸ್ಥೆ ಡಿಜಿಟಲೀಕರಣಗೊಳಿಸಲಾಗಿದ್ದು, ಮೈಸೂರು ಸೇರಿದಂತೆ ರಾಜ್ಯದ ೧೦ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದು ಜನ ಬಳಕೆಗೆ ಸಿಗಲಿದೆ. ಇದಕ್ಕಾಗಿಯೇ ಇಲಾಖೆ ಹಾಗೂ ನಿಗಮದಿಂದ ತಂತ್ರಜ್ಞಾನದ ಕುರಿತು ತರಬೇತಿಯನ್ನು ಆಗಸ್ಟ್ ೧೦ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಧನ್ವಂತ್ರಿ ರಸ್ತೆಯಲ್ಲಿರುವ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ ೧೦ಕ್ಕೆ ನಡೆಯುವ ಕಾರ್ಯಾಗಾರವನ್ನು ಇಲಾಖೆ ಆಯುಕ್ತ ಡಾ.ಬಸವರಾಜೇಂದ್ರ ಉದ್ಘಾಟಿಸುವರು. ಇಲಾಖೆ ನಿರ್ದೇಶಕ ಡಾ. ಮಂಜುನಾಥ ಪಾಳೇಗಾರ್, ಅಪರ ನಿರ್ದೇಶಕ ಡಾ.ಪ್ರಸಾದ್ ಮೂರ್ತಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಪಂಪಾಪತಿ, ಜಂಟಿ ನಿರ್ದೇಶಕರಾದ ಡಾ.ವೀರಭದ್ರಯ್ಯ, ಎನ್ ಇಎಂಎಲ್ ಸಂಸ್ಥೆಯ ಹರ್ಷ ಹಾಜರಿರುವರು. ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಉಪನಿರ್ದೇಶಕರು, ಮುಖ್ಯ ಪಶು ವೈದ್ಯಾಧಿಕಾರಿಗಳು, ನಿಗಮದ ಸಹಾಯಕ ನಿರ್ದೇಶಕರು, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ರೈತ ಉತ್ಪಾದಕ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನಿರ್ದೇಶಕರು ಪಾಲ್ಗೊಳ್ಳುವರು ಎಂದು ನಿಗಮದ ಮೈಸೂರು ಸಹಾಯಕ ನಿರ್ದೇಶಕ ಡಾ.ಮ.ಪು.ಪೂರ್ಣಾನಂದ ತಿಳಿಸಿದ್ದಾರೆ.
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…