ಜಿಲ್ಲೆಗಳು

ಕುರಿ- ಮೇಕೆ ಖರೀದಿ ಇನ್ನು ಆನ್‌ಲೈನ್ ನಲ್ಲಿ ಲಭ್ಯ

ಮೈಸೂರು: ಕುರಿ ಹಾಗೂ ಮೇಕೆಗಳನ್ನು ಇನ್ನು ನೀವು ಮಾರುಕಟ್ಟೆಗೆ ಹೋಗಿಯೇ ಖರೀದಿಸಬೇಕಿಲ್ಲ. ಇದಕ್ಕಾಗಿ ಆನ್‌ಲೈನ್ ಸೇವೆಗೆ ಅಣಿಗೊಳಿಸಲಾಗುತ್ತಿದ್ದು, ಮನೆಯಲ್ಲಿಯೇ ಕುಳಿತು ಸೂಕ್ತ ಮಾಹಿತಿ ಪಡೆದು ಖರೀದಿಸುವ ಡಿಜಿಟಲ್ ಮಾರುಕಟ್ಟೆ ವ್ಯವಸ್ಥೆ ಮೈಸೂರಿನಲ್ಲಿ ಜಾರಿಗೆ ಬರುತ್ತಿದೆ.

 

ಕುರಿ ಹಾಗೂ ಮೇಕೆಗಳ ಮಾರುಕಟ್ಟೆ ವ್ಯವಸ್ಥೆ ಡಿಜಿಟಲೀಕರಣಗೊಳಿಸಲಾಗಿದ್ದು, ಮೈಸೂರು ಸೇರಿದಂತೆ ರಾಜ್ಯದ ೧೦ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದು ಜನ ಬಳಕೆಗೆ ಸಿಗಲಿದೆ. ಇದಕ್ಕಾಗಿಯೇ ಇಲಾಖೆ ಹಾಗೂ ನಿಗಮದಿಂದ ತಂತ್ರಜ್ಞಾನದ ಕುರಿತು ತರಬೇತಿಯನ್ನು ಆಗಸ್ಟ್ ೧೦ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಧನ್ವಂತ್ರಿ ರಸ್ತೆಯಲ್ಲಿರುವ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ ೧೦ಕ್ಕೆ ನಡೆಯುವ ಕಾರ್ಯಾಗಾರವನ್ನು ಇಲಾಖೆ ಆಯುಕ್ತ ಡಾ.ಬಸವರಾಜೇಂದ್ರ ಉದ್ಘಾಟಿಸುವರು. ಇಲಾಖೆ ನಿರ್ದೇಶಕ ಡಾ. ಮಂಜುನಾಥ ಪಾಳೇಗಾರ್,  ಅಪರ ನಿರ್ದೇಶಕ ಡಾ.ಪ್ರಸಾದ್ ಮೂರ್ತಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಪಂಪಾಪತಿ,  ಜಂಟಿ ನಿರ್ದೇಶಕರಾದ ಡಾ.ವೀರಭದ್ರಯ್ಯ, ಎನ್ ಇಎಂಎಲ್ ಸಂಸ್ಥೆಯ ಹರ್ಷ ಹಾಜರಿರುವರು. ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಉಪನಿರ್ದೇಶಕರು, ಮುಖ್ಯ ಪಶು ವೈದ್ಯಾಧಿಕಾರಿಗಳು, ನಿಗಮದ ಸಹಾಯಕ ನಿರ್ದೇಶಕರು, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ‌್ಯದರ್ಶಿಗಳು, ರೈತ ಉತ್ಪಾದಕ ಸಂಸ್ಥೆಯ ಕಾರ‌್ಯನಿರ್ವಾಹಕ ಅಧಿಕಾರಿಗಳು ಮತ್ತು ನಿರ್ದೇಶಕರು ಪಾಲ್ಗೊಳ್ಳುವರು ಎಂದು ನಿಗಮದ ಮೈಸೂರು ಸಹಾಯಕ ನಿರ್ದೇಶಕ ಡಾ.ಮ.ಪು.ಪೂರ್ಣಾನಂದ ತಿಳಿಸಿದ್ದಾರೆ.

andolanait

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

14 hours ago