ಜಿಲ್ಲೆಗಳು

ಕುರಿ- ಮೇಕೆ ಖರೀದಿ ಇನ್ನು ಆನ್‌ಲೈನ್ ನಲ್ಲಿ ಲಭ್ಯ

ಮೈಸೂರು: ಕುರಿ ಹಾಗೂ ಮೇಕೆಗಳನ್ನು ಇನ್ನು ನೀವು ಮಾರುಕಟ್ಟೆಗೆ ಹೋಗಿಯೇ ಖರೀದಿಸಬೇಕಿಲ್ಲ. ಇದಕ್ಕಾಗಿ ಆನ್‌ಲೈನ್ ಸೇವೆಗೆ ಅಣಿಗೊಳಿಸಲಾಗುತ್ತಿದ್ದು, ಮನೆಯಲ್ಲಿಯೇ ಕುಳಿತು ಸೂಕ್ತ ಮಾಹಿತಿ ಪಡೆದು ಖರೀದಿಸುವ ಡಿಜಿಟಲ್ ಮಾರುಕಟ್ಟೆ ವ್ಯವಸ್ಥೆ ಮೈಸೂರಿನಲ್ಲಿ ಜಾರಿಗೆ ಬರುತ್ತಿದೆ.

 

ಕುರಿ ಹಾಗೂ ಮೇಕೆಗಳ ಮಾರುಕಟ್ಟೆ ವ್ಯವಸ್ಥೆ ಡಿಜಿಟಲೀಕರಣಗೊಳಿಸಲಾಗಿದ್ದು, ಮೈಸೂರು ಸೇರಿದಂತೆ ರಾಜ್ಯದ ೧೦ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದು ಜನ ಬಳಕೆಗೆ ಸಿಗಲಿದೆ. ಇದಕ್ಕಾಗಿಯೇ ಇಲಾಖೆ ಹಾಗೂ ನಿಗಮದಿಂದ ತಂತ್ರಜ್ಞಾನದ ಕುರಿತು ತರಬೇತಿಯನ್ನು ಆಗಸ್ಟ್ ೧೦ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಧನ್ವಂತ್ರಿ ರಸ್ತೆಯಲ್ಲಿರುವ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ ೧೦ಕ್ಕೆ ನಡೆಯುವ ಕಾರ್ಯಾಗಾರವನ್ನು ಇಲಾಖೆ ಆಯುಕ್ತ ಡಾ.ಬಸವರಾಜೇಂದ್ರ ಉದ್ಘಾಟಿಸುವರು. ಇಲಾಖೆ ನಿರ್ದೇಶಕ ಡಾ. ಮಂಜುನಾಥ ಪಾಳೇಗಾರ್,  ಅಪರ ನಿರ್ದೇಶಕ ಡಾ.ಪ್ರಸಾದ್ ಮೂರ್ತಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಪಂಪಾಪತಿ,  ಜಂಟಿ ನಿರ್ದೇಶಕರಾದ ಡಾ.ವೀರಭದ್ರಯ್ಯ, ಎನ್ ಇಎಂಎಲ್ ಸಂಸ್ಥೆಯ ಹರ್ಷ ಹಾಜರಿರುವರು. ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಉಪನಿರ್ದೇಶಕರು, ಮುಖ್ಯ ಪಶು ವೈದ್ಯಾಧಿಕಾರಿಗಳು, ನಿಗಮದ ಸಹಾಯಕ ನಿರ್ದೇಶಕರು, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ‌್ಯದರ್ಶಿಗಳು, ರೈತ ಉತ್ಪಾದಕ ಸಂಸ್ಥೆಯ ಕಾರ‌್ಯನಿರ್ವಾಹಕ ಅಧಿಕಾರಿಗಳು ಮತ್ತು ನಿರ್ದೇಶಕರು ಪಾಲ್ಗೊಳ್ಳುವರು ಎಂದು ನಿಗಮದ ಮೈಸೂರು ಸಹಾಯಕ ನಿರ್ದೇಶಕ ಡಾ.ಮ.ಪು.ಪೂರ್ಣಾನಂದ ತಿಳಿಸಿದ್ದಾರೆ.

andolanait

Recent Posts

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

29 mins ago

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

59 mins ago

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

1 hour ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

2 hours ago

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

2 hours ago

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

4 hours ago