ಹನೂರು: ಕುರಿ ಕಳ್ಳತನ ಮಾಡಿದ್ದ ಆರೋಪಿ ಹಾಗೂ ಕುರಿಯನ್ನು ವಶಕ್ಕೆ ಪಡೆಯುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಅಲಿಯಾಸ್ ವಿಜಿ ಬಂಧಿತ ಆರೋಪಿಯಾಗಿದ್ದಾನೆ .
ಘಟನೆ ವಿವರ :ತೋಟದ ಜಮೀನಿನ ಮುಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ 6ಸಾವಿರ ಮೌಲ್ಯದ 2ಗಂಡು ಕುರಿ ಕಳ್ಳತನವಾಗಿರುವ ಬಗ್ಗೆ ಮಣಿಕಂಠ ಎಂಬುವವರು ರಾಮಾಪುರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಪ್ರಸಾದ್, ವೃತ್ತ ನಿರೀಕ್ಷಕ ನಂಜುಂಡಸ್ವಾಮಿ ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದಾಗ, ಭಾನುವಾರ ರಾಮಪುರ ಗ್ರಾಮದಲ್ಲಿ ಜರುಗುವ ಭಾನುವಾರದ ವಾರದ ಸಂತೆಗೆ ka-05 jq0280 ಪಲ್ಸರ್ ಮೋಟಾರ್ ಬೈಕ್ ನಲ್ಲಿ 2 ಕುರಿಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಬಂದಿದ್ದ ಆರೋಪಿ ವಿಶ್ವನನ್ನು ವಿಚಾರಣೆ ನಡೆಸಿದಾಗ ಕುರಿಗಳನ್ನು ಕಳ್ಳತನ ಮಾಡಿಕೊಂಡು ಬಂದು ಮಾರಾಟ ಮಾಡುತ್ತಿದ್ದೇನೆ ಎಂದು ಒಪ್ಪಿಕೊಂಡ ಹಿನ್ನೆಲೆ ಮೋಟಾರ್ ಬೈಕ್ ಹಾಗೂ ಕುರಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪೇದೆಗಳಾದ ಸೈಯದ್ ಮುಶ್ರಫ್, ರಮೇಶ್ ಕುಮಾರ್ ಲಿಯಾಕತ್ ಅಲಿ ಖಾನ್ ಪಾಲ್ಗೊಂಡಿದ್ದರು.
ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…