ಹನೂರು: ಕುರಿ ಕಳ್ಳತನ ಮಾಡಿದ್ದ ಆರೋಪಿ ಹಾಗೂ ಕುರಿಯನ್ನು ವಶಕ್ಕೆ ಪಡೆಯುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಅಲಿಯಾಸ್ ವಿಜಿ ಬಂಧಿತ ಆರೋಪಿಯಾಗಿದ್ದಾನೆ .
ಘಟನೆ ವಿವರ :ತೋಟದ ಜಮೀನಿನ ಮುಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ 6ಸಾವಿರ ಮೌಲ್ಯದ 2ಗಂಡು ಕುರಿ ಕಳ್ಳತನವಾಗಿರುವ ಬಗ್ಗೆ ಮಣಿಕಂಠ ಎಂಬುವವರು ರಾಮಾಪುರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಪ್ರಸಾದ್, ವೃತ್ತ ನಿರೀಕ್ಷಕ ನಂಜುಂಡಸ್ವಾಮಿ ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದಾಗ, ಭಾನುವಾರ ರಾಮಪುರ ಗ್ರಾಮದಲ್ಲಿ ಜರುಗುವ ಭಾನುವಾರದ ವಾರದ ಸಂತೆಗೆ ka-05 jq0280 ಪಲ್ಸರ್ ಮೋಟಾರ್ ಬೈಕ್ ನಲ್ಲಿ 2 ಕುರಿಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಬಂದಿದ್ದ ಆರೋಪಿ ವಿಶ್ವನನ್ನು ವಿಚಾರಣೆ ನಡೆಸಿದಾಗ ಕುರಿಗಳನ್ನು ಕಳ್ಳತನ ಮಾಡಿಕೊಂಡು ಬಂದು ಮಾರಾಟ ಮಾಡುತ್ತಿದ್ದೇನೆ ಎಂದು ಒಪ್ಪಿಕೊಂಡ ಹಿನ್ನೆಲೆ ಮೋಟಾರ್ ಬೈಕ್ ಹಾಗೂ ಕುರಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪೇದೆಗಳಾದ ಸೈಯದ್ ಮುಶ್ರಫ್, ರಮೇಶ್ ಕುಮಾರ್ ಲಿಯಾಕತ್ ಅಲಿ ಖಾನ್ ಪಾಲ್ಗೊಂಡಿದ್ದರು.
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…
ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ…
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್ಗೆ ಲಿಫ್ಟ್…