ಜಿಲ್ಲೆಗಳು

ಕುರಿ ಕಳ್ಳತನ : ಆರೋಪಿ ಪೊಲೀಸರ ವಶ, ಕುರಿ ಸೇಫ್

ಹನೂರು: ಕುರಿ ಕಳ್ಳತನ ಮಾಡಿದ್ದ ಆರೋಪಿ ಹಾಗೂ ಕುರಿಯನ್ನು ವಶಕ್ಕೆ ಪಡೆಯುವಲ್ಲಿ ರಾಮಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲ್ಲೂಕಿನ ಪುದುರಾಮಾಪುರ ಗ್ರಾಮದ ವಿಶ್ವ ಅಲಿಯಾಸ್ ವಿಜಿ ಬಂಧಿತ ಆರೋಪಿಯಾಗಿದ್ದಾನೆ .

ಘಟನೆ ವಿವರ :ತೋಟದ ಜಮೀನಿನ ಮುಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ 6ಸಾವಿರ ಮೌಲ್ಯದ 2ಗಂಡು ಕುರಿ ಕಳ್ಳತನವಾಗಿರುವ ಬಗ್ಗೆ ಮಣಿಕಂಠ ಎಂಬುವವರು ರಾಮಾಪುರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಪ್ರಸಾದ್, ವೃತ್ತ ನಿರೀಕ್ಷಕ ನಂಜುಂಡಸ್ವಾಮಿ ರವರ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದಾಗ, ಭಾನುವಾರ ರಾಮಪುರ ಗ್ರಾಮದಲ್ಲಿ ಜರುಗುವ ಭಾನುವಾರದ ವಾರದ ಸಂತೆಗೆ ka-05 jq0280 ಪಲ್ಸರ್ ಮೋಟಾರ್ ಬೈಕ್ ನಲ್ಲಿ 2 ಕುರಿಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಬಂದಿದ್ದ ಆರೋಪಿ ವಿಶ್ವನನ್ನು ವಿಚಾರಣೆ ನಡೆಸಿದಾಗ ಕುರಿಗಳನ್ನು ಕಳ್ಳತನ ಮಾಡಿಕೊಂಡು ಬಂದು ಮಾರಾಟ ಮಾಡುತ್ತಿದ್ದೇನೆ ಎಂದು ಒಪ್ಪಿಕೊಂಡ ಹಿನ್ನೆಲೆ ಮೋಟಾರ್ ಬೈಕ್ ಹಾಗೂ ಕುರಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪೇದೆಗಳಾದ ಸೈಯದ್ ಮುಶ್ರಫ್, ರಮೇಶ್ ಕುಮಾರ್ ಲಿಯಾಕತ್ ಅಲಿ ಖಾನ್ ಪಾಲ್ಗೊಂಡಿದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago