ಜಿಲ್ಲೆಗಳು

ಮದ್ದೂರು: ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆ ಹಿಡಿಯಲು ಅರಣ್ಯ ಸಿಬ್ಬಂದಿ ಕಾವಲು

ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ.
ಸುಮಾರು ಐದಾರು ಗಂಟೆಯಿಂದ
ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿದ್ದು ಐದಾರು ತಿಂಗಳ ಹಿಂದೆ ನಾಲ್ಕು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು.
ಆದರೆ ಚಿರತೆ ಮತ್ತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರೈತರು ತಮ್ಮ ಹೊಲಗದ್ದೆಗಳಿಗೆ ಹಗಲು ವೇಳೆ ಒಬ್ಬೊಬ್ಬರೇ ಹೋಗಲು ಸಹ ಭಯಭೀತರಾಗಿದ್ದಾರೆ.

ಶಾಲಾ ಮಕ್ಕಳು, ವೃದ್ಧರು ಮಹಿಳೆಯರು ಗ್ರಾಮದ ಹೊರಕ್ಕೆ ಹೋಗಲೂ ಭಯಪಡುವಂತಾಗಿದೆ
ಅರಣ್ಯ ಇಲಾಖೆಯವರು ಗ್ರಾಮಸ್ಥರ ನೆರವಿನೊಂದಿಗೆ ಬೋನುಗಳನ್ನು ಇಟ್ಟು ಚಿರತೆ ಹಿಡಿದು ಈ ಭಾಗದ ರೈತರ ಜೀವ ಉಳಿಸಲು ಮುಂದಾಗ ಬೇಕೆಂದು ಗ್ರಾಮದ ಮುಖಂಡ ಕುಂದನ್ ಕುಪ್ಪೆ ಕುಮಾರ್ ಅವರು ಒತ್ತಾಯಿಸಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago