ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ.
ಸುಮಾರು ಐದಾರು ಗಂಟೆಯಿಂದ
ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿದ್ದು ಐದಾರು ತಿಂಗಳ ಹಿಂದೆ ನಾಲ್ಕು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು.
ಆದರೆ ಚಿರತೆ ಮತ್ತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರೈತರು ತಮ್ಮ ಹೊಲಗದ್ದೆಗಳಿಗೆ ಹಗಲು ವೇಳೆ ಒಬ್ಬೊಬ್ಬರೇ ಹೋಗಲು ಸಹ ಭಯಭೀತರಾಗಿದ್ದಾರೆ.
ಶಾಲಾ ಮಕ್ಕಳು, ವೃದ್ಧರು ಮಹಿಳೆಯರು ಗ್ರಾಮದ ಹೊರಕ್ಕೆ ಹೋಗಲೂ ಭಯಪಡುವಂತಾಗಿದೆ
ಅರಣ್ಯ ಇಲಾಖೆಯವರು ಗ್ರಾಮಸ್ಥರ ನೆರವಿನೊಂದಿಗೆ ಬೋನುಗಳನ್ನು ಇಟ್ಟು ಚಿರತೆ ಹಿಡಿದು ಈ ಭಾಗದ ರೈತರ ಜೀವ ಉಳಿಸಲು ಮುಂದಾಗ ಬೇಕೆಂದು ಗ್ರಾಮದ ಮುಖಂಡ ಕುಂದನ್ ಕುಪ್ಪೆ ಕುಮಾರ್ ಅವರು ಒತ್ತಾಯಿಸಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…