ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ.
ಸುಮಾರು ಐದಾರು ಗಂಟೆಯಿಂದ
ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ ವಿಪರೀತವಾಗಿದ್ದು ಐದಾರು ತಿಂಗಳ ಹಿಂದೆ ನಾಲ್ಕು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು.
ಆದರೆ ಚಿರತೆ ಮತ್ತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರೈತರು ತಮ್ಮ ಹೊಲಗದ್ದೆಗಳಿಗೆ ಹಗಲು ವೇಳೆ ಒಬ್ಬೊಬ್ಬರೇ ಹೋಗಲು ಸಹ ಭಯಭೀತರಾಗಿದ್ದಾರೆ.
ಶಾಲಾ ಮಕ್ಕಳು, ವೃದ್ಧರು ಮಹಿಳೆಯರು ಗ್ರಾಮದ ಹೊರಕ್ಕೆ ಹೋಗಲೂ ಭಯಪಡುವಂತಾಗಿದೆ
ಅರಣ್ಯ ಇಲಾಖೆಯವರು ಗ್ರಾಮಸ್ಥರ ನೆರವಿನೊಂದಿಗೆ ಬೋನುಗಳನ್ನು ಇಟ್ಟು ಚಿರತೆ ಹಿಡಿದು ಈ ಭಾಗದ ರೈತರ ಜೀವ ಉಳಿಸಲು ಮುಂದಾಗ ಬೇಕೆಂದು ಗ್ರಾಮದ ಮುಖಂಡ ಕುಂದನ್ ಕುಪ್ಪೆ ಕುಮಾರ್ ಅವರು ಒತ್ತಾಯಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…