ಉಕ್ಕಿ ಹರಿಯುವ ನೀರಿನ ಮಧ್ಯೆ 900 ಕುರಿಗಳೊಂದಿಗೆ 10 ಕುರಿಗಾಹಿಗಳು ಬಂಧಿ
ಕೆ.ಆರ್.ಪೇಟೆ: ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿಯ ದ್ವೀಪದಲ್ಲಿ 900 ಕುರಿಗಳೊಂದಿಗೆ 10ಮಂದಿ ಕುರಿಗಾಹಿಗಳು ಅಪಾಯದಲ್ಲಿ ಸಿಲುಕಿದ್ದಾರೆ.
ಎರಡು ದಿನಗಳಿಂದ ಆಹಾರವಿಲ್ಲದೆ ಬಳಲುತ್ತಿರುವ 10ಮಂದಿ ಕುರಿಗಾಹಿಗಳ ತಂಡ. ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಹೋಬಳಿ ದಸೂಡಿ ಪಕ್ಕ ಕರೆಬಲಾಯ್ಯನಹಟ್ಟಿ ನಿವಾಸಿ, ತಿಮ್ಮಯ್ಯ, ಮತ್ತು ಚಿತ್ರದೇವರಹಟ್ಟಿ, ಗಂಗಣ್ಣ ಈ 2, ಕುಟುಂಬದ 900 ಕುರಿಗಳು ವಲಸೆ ಹೋಗಿದ್ದು ಮಂಡ್ಯ ಜಿಲ್ಲೆ, KR ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳದ ಪಕ್ಕ 1ಕಿಲೋ ಮೀಟರ್ ದೂರದಲ್ಲೀರುವ 2 ಹೊಳೆಗಳ ಮಧ್ಯೆ 300 ಎಕ್ಕರೆ ಖಾಲಿ ಜಾಗವಿರುತ್ತದೆ. ಕುರಿಗಳಿಗೆ ಮೇವು ಜಾಸ್ತಿ ಇದ್ದಿದ್ದರಿಂದ ಪ್ರತಿ ವರ್ಷ ಅಲ್ಲಿಗೆ ಹೋಗಿ 8 ರಿಂದ 10 ದಿವಸ ಕುರಿಗಳನ್ನು ಮೇಯಿಸಿಕೊಂಡು ವಾಪಸ್ಸು ದ್ವೀಪದಿಂದ ಹೊರಗಡೆ ಬರುತ್ತಿದ್ದರು. ಆದರೆ ಈಗ 15, ದಿನದ ಹಿಂದೆ ಪ್ರತಿ ವರ್ಷದಂತೆ ಅದೇ ದ್ವೀಪ ಜಾಗಕ್ಕೆ ಕುರಿಗಳನ್ನು ಮೇಯಿಸಲು ಹೋಗಿರುತ್ತಾರೆ, ಹೋಗಿದ್ದ ರಾತ್ರಿವೇಳೆಯಲ್ಲಿ ಸುತ್ತಲೂ ಹರಿಯುವ ಹೇಮಾವತಿ ನದಿಯಲ್ಲಿ ನೀರು ಜಾಸ್ತಿಯಾಗಿದ್ದು, ಆ ಎರಡು ಕುಟುಂಬದ 10 ಮಂದಿ ಕುರಿಗಾಹಿಗಳು ಹಾಗೂ ಸುಮಾರು 900 ಕುರಿಗಳು ದ್ವೀಪದ ಮದ್ಯದಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ, ನದಿಯ ನೀರು ಜಾಸ್ತಿಯಾಗಿದೆ, ಅಲ್ಲಿನ ನೀರಿನ ಹರಿಯುವ ಪ್ರಮಾಣ ತುಂಬಾ ಜಾಸ್ತಿಯಾಗಿದ್ದು ಅಪಾಯ ದಲ್ಲಿ ಸಿಲುಕಿದ್ದಾರೆ.
ವಿಷಯ ತಿಳಿದ ಕೂಡಲೇ ತಹಸೀಲ್ದಾರ್ ಎಂ.ವಿ.ರೂಪಾ ಅವರು ಅಗ್ನಿಶಾಮಕ ಹಾಗೂ ಪೋಲೀಸ್ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಬೇಟಿ ನೀಡಿ ಕುರಿಗಾಯಿಗಳಿಗೆ ಊಟೋಪಚಾರ ನೀಡಿ, ಸುರಕ್ಷಿತವಾಗಿ ಹೊರಗೆ ಕರೆತರಲು ಅವಿರತ ಪ್ರಯತ್ನ ಮಾಡುತ್ತಿದ್ದಾರೆ
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…