ಜಿಲ್ಲೆಗಳು

ಹೇಮಾವತಿ ನದಿ ದ್ವೀಪದಲ್ಲಿ ಸಿಕ್ಕಿಬಿದ್ದ ಕುರಿಗಾಹಿಗಳು

ಉಕ್ಕಿ ಹರಿಯುವ ನೀರಿನ ಮಧ್ಯೆ 900 ಕುರಿಗಳೊಂದಿಗೆ 10 ಕುರಿಗಾಹಿಗಳು ಬಂಧಿ

 ಕೆ.ಆರ್.ಪೇಟೆ: ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿಯ ದ್ವೀಪದಲ್ಲಿ 900 ಕುರಿಗಳೊಂದಿಗೆ  10ಮಂದಿ ಕುರಿಗಾಹಿಗಳು ಅಪಾಯದಲ್ಲಿ ಸಿಲುಕಿದ್ದಾರೆ.

ಎರಡು ದಿನಗಳಿಂದ ಆಹಾರವಿಲ್ಲದೆ ಬಳಲುತ್ತಿರುವ 10ಮಂದಿ ಕುರಿಗಾಹಿಗಳ ತಂಡ. ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಹೋಬಳಿ ದಸೂಡಿ ಪಕ್ಕ ಕರೆಬಲಾಯ್ಯನಹಟ್ಟಿ ನಿವಾಸಿ, ತಿಮ್ಮಯ್ಯ, ಮತ್ತು ಚಿತ್ರದೇವರಹಟ್ಟಿ, ಗಂಗಣ್ಣ ಈ 2, ಕುಟುಂಬದ 900 ಕುರಿಗಳು ವಲಸೆ ಹೋಗಿದ್ದು ಮಂಡ್ಯ ಜಿಲ್ಲೆ, KR ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳದ ಪಕ್ಕ 1ಕಿಲೋ ಮೀಟರ್ ದೂರದಲ್ಲೀರುವ 2 ಹೊಳೆಗಳ ಮಧ್ಯೆ 300 ಎಕ್ಕರೆ ಖಾಲಿ ಜಾಗವಿರುತ್ತದೆ. ಕುರಿಗಳಿಗೆ ಮೇವು ಜಾಸ್ತಿ ಇದ್ದಿದ್ದರಿಂದ ಪ್ರತಿ ವರ್ಷ ಅಲ್ಲಿಗೆ ಹೋಗಿ 8 ರಿಂದ 10 ದಿವಸ ಕುರಿಗಳನ್ನು ಮೇಯಿಸಿಕೊಂಡು ವಾಪಸ್ಸು ದ್ವೀಪದಿಂದ ಹೊರಗಡೆ ಬರುತ್ತಿದ್ದರು. ಆದರೆ ಈಗ 15, ದಿನದ ಹಿಂದೆ ಪ್ರತಿ ವರ್ಷದಂತೆ ಅದೇ ದ್ವೀಪ ಜಾಗಕ್ಕೆ ಕುರಿಗಳನ್ನು ಮೇಯಿಸಲು ಹೋಗಿರುತ್ತಾರೆ, ಹೋಗಿದ್ದ ರಾತ್ರಿವೇಳೆಯಲ್ಲಿ ಸುತ್ತಲೂ ಹರಿಯುವ ಹೇಮಾವತಿ ನದಿಯಲ್ಲಿ ನೀರು ಜಾಸ್ತಿಯಾಗಿದ್ದು, ಆ ಎರಡು ಕುಟುಂಬದ 10 ಮಂದಿ ಕುರಿಗಾಹಿಗಳು ಹಾಗೂ ಸುಮಾರು 900 ಕುರಿಗಳು ದ್ವೀಪದ ಮದ್ಯದಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ, ನದಿಯ ನೀರು ಜಾಸ್ತಿಯಾಗಿದೆ, ಅಲ್ಲಿನ ನೀರಿನ ಹರಿಯುವ ಪ್ರಮಾಣ ತುಂಬಾ ಜಾಸ್ತಿಯಾಗಿದ್ದು ಅಪಾಯ ದಲ್ಲಿ ಸಿಲುಕಿದ್ದಾರೆ.

ವಿಷಯ ತಿಳಿದ ಕೂಡಲೇ ತಹಸೀಲ್ದಾರ್ ಎಂ.ವಿ.ರೂಪಾ ಅವರು ಅಗ್ನಿಶಾಮಕ ಹಾಗೂ ಪೋಲೀಸ್ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಬೇಟಿ ನೀಡಿ ಕುರಿಗಾಯಿಗಳಿಗೆ ಊಟೋಪಚಾರ ನೀಡಿ, ಸುರಕ್ಷಿತವಾಗಿ ಹೊರಗೆ ಕರೆತರಲು ಅವಿರತ ಪ್ರಯತ್ನ ಮಾಡುತ್ತಿದ್ದಾರೆ

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

14 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

14 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

15 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

16 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

20 hours ago