ಉಕ್ಕಿ ಹರಿಯುವ ನೀರಿನ ಮಧ್ಯೆ 900 ಕುರಿಗಳೊಂದಿಗೆ 10 ಕುರಿಗಾಹಿಗಳು ಬಂಧಿ
ಕೆ.ಆರ್.ಪೇಟೆ: ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿಯ ದ್ವೀಪದಲ್ಲಿ 900 ಕುರಿಗಳೊಂದಿಗೆ 10ಮಂದಿ ಕುರಿಗಾಹಿಗಳು ಅಪಾಯದಲ್ಲಿ ಸಿಲುಕಿದ್ದಾರೆ.
ಎರಡು ದಿನಗಳಿಂದ ಆಹಾರವಿಲ್ಲದೆ ಬಳಲುತ್ತಿರುವ 10ಮಂದಿ ಕುರಿಗಾಹಿಗಳ ತಂಡ. ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಹೋಬಳಿ ದಸೂಡಿ ಪಕ್ಕ ಕರೆಬಲಾಯ್ಯನಹಟ್ಟಿ ನಿವಾಸಿ, ತಿಮ್ಮಯ್ಯ, ಮತ್ತು ಚಿತ್ರದೇವರಹಟ್ಟಿ, ಗಂಗಣ್ಣ ಈ 2, ಕುಟುಂಬದ 900 ಕುರಿಗಳು ವಲಸೆ ಹೋಗಿದ್ದು ಮಂಡ್ಯ ಜಿಲ್ಲೆ, KR ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳದ ಪಕ್ಕ 1ಕಿಲೋ ಮೀಟರ್ ದೂರದಲ್ಲೀರುವ 2 ಹೊಳೆಗಳ ಮಧ್ಯೆ 300 ಎಕ್ಕರೆ ಖಾಲಿ ಜಾಗವಿರುತ್ತದೆ. ಕುರಿಗಳಿಗೆ ಮೇವು ಜಾಸ್ತಿ ಇದ್ದಿದ್ದರಿಂದ ಪ್ರತಿ ವರ್ಷ ಅಲ್ಲಿಗೆ ಹೋಗಿ 8 ರಿಂದ 10 ದಿವಸ ಕುರಿಗಳನ್ನು ಮೇಯಿಸಿಕೊಂಡು ವಾಪಸ್ಸು ದ್ವೀಪದಿಂದ ಹೊರಗಡೆ ಬರುತ್ತಿದ್ದರು. ಆದರೆ ಈಗ 15, ದಿನದ ಹಿಂದೆ ಪ್ರತಿ ವರ್ಷದಂತೆ ಅದೇ ದ್ವೀಪ ಜಾಗಕ್ಕೆ ಕುರಿಗಳನ್ನು ಮೇಯಿಸಲು ಹೋಗಿರುತ್ತಾರೆ, ಹೋಗಿದ್ದ ರಾತ್ರಿವೇಳೆಯಲ್ಲಿ ಸುತ್ತಲೂ ಹರಿಯುವ ಹೇಮಾವತಿ ನದಿಯಲ್ಲಿ ನೀರು ಜಾಸ್ತಿಯಾಗಿದ್ದು, ಆ ಎರಡು ಕುಟುಂಬದ 10 ಮಂದಿ ಕುರಿಗಾಹಿಗಳು ಹಾಗೂ ಸುಮಾರು 900 ಕುರಿಗಳು ದ್ವೀಪದ ಮದ್ಯದಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ, ನದಿಯ ನೀರು ಜಾಸ್ತಿಯಾಗಿದೆ, ಅಲ್ಲಿನ ನೀರಿನ ಹರಿಯುವ ಪ್ರಮಾಣ ತುಂಬಾ ಜಾಸ್ತಿಯಾಗಿದ್ದು ಅಪಾಯ ದಲ್ಲಿ ಸಿಲುಕಿದ್ದಾರೆ.
ವಿಷಯ ತಿಳಿದ ಕೂಡಲೇ ತಹಸೀಲ್ದಾರ್ ಎಂ.ವಿ.ರೂಪಾ ಅವರು ಅಗ್ನಿಶಾಮಕ ಹಾಗೂ ಪೋಲೀಸ್ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಬೇಟಿ ನೀಡಿ ಕುರಿಗಾಯಿಗಳಿಗೆ ಊಟೋಪಚಾರ ನೀಡಿ, ಸುರಕ್ಷಿತವಾಗಿ ಹೊರಗೆ ಕರೆತರಲು ಅವಿರತ ಪ್ರಯತ್ನ ಮಾಡುತ್ತಿದ್ದಾರೆ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…