ಜಿಲ್ಲೆಗಳು

ಶಿವಪುರದ ಲೋಕೇಶ್‌ ಅವರಿಂದ ಶಾಸಕ ಆರ್. ನರೇಂದ್ರ ಅವರಿಗೆ ಸನ್ಮಾನ

ಹನೂರು: (ಕೊಳ್ಳೇಗಾಲ):  ಹನೂರು ತಾಲೂಕಿನಿಂದ ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾದ ಹಿನ್ನೆಲೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶಿವಪುರ ಲೋಕೇಶ್ ರವರು ಶಾಸಕ ಆರ್ ನರೇಂದ್ರ ರವರನ್ನು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಆರ್ ನರೇಂದ್ರ ಅವಿಭಾಜಿತ ಕೊಳ್ಳೇಗಾಲ ಹನೂರು ತಾಲೂಕಿನಿಂದ ಇದುವರೆಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಿಲ್ಲಾ ಹಾಪ್ ಕಾಮ್ಸ್ ನಿರ್ದೇಶಕರಾಗಿ ಆಯ್ಕೆಯಾಗಿರಲಿಲ್ಲ, ಇದೀಗ ಖಾತೆ ತೆರೆದಿರುವುದು ಸಂತಸದ ವಿಚಾರ ಮುಂದಿನ ದಿನಗಳಲ್ಲಿ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಕೊಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ, ಹಾಪ ಕಾಮ್ಸ್ ನಿಂದ ದೊರೆಯುವ ಸವಲತ್ತುಗಳನ್ನು ರೈತರಿಗೆ ದೊರಕಿಸಿ ಕೊಡುವ ನಿಟ್ಟಿನಲ್ಲಿ ಒತ್ತು ನೀಡಬೇಕು ಎಂದು ನೂತನ ನಿರ್ದೇಶಕ ಲೋಕೇಶ್ ಶಿವಪುರ ಅವರಿಗೆ ಸಲಹೆ ನೀಡಿದರು.

ನೂತನ ನಿರ್ದೇಶಕ ಶಿವಪುರ ಲೋಕೇಶ್ ಮಾತನಾಡಿ ನಾನು ಕೂಡ ರೈತ ಕುಟುಂಬದ ಸದಸ್ಯನಾಗಿದ್ದು ರೈತರ ಪರವಾಗಿ ಸದಾ ಹೋರಾಟ ಮಾಡುತ್ತೇನೆ, ತಾಲೂಕಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಹಾಪ್ ಕಾಮ್ಸ್ ಮಳಿಗೆ ತೆರೆಯಲಾಗುವುದು ಎಂದು ತಿಳಿಸಿದರು.

ಈ ವೇಳೆ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಮದುವನಹಳ್ಳಿ ಶಿವಕುಮಾರ್, ಪಪಂ ಉಪಾಧ್ಯಕ್ಷ ಗಿರೀಶ್ ,ಮಾಜಿ ಸದಸ್ಯ ಮಾದೇಶ್ ಮುಖಂಡರುಗಳಾದ ಮಾದೇಶ್, ಕಣ್ಣೂರು ಮಹದೇವಸ್ವಾಮಿ, ಮಂಗಲ ಪುಟ್ಟರಾಜು,ವಾಸು ಇನ್ನಿತರರು ಹಾಜರಿದ್ದರು

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

1 hour ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

1 hour ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago