ಜಿಲ್ಲೆಗಳು

’ಮತದಾನ ಪ್ರಕ್ರಿಯೆಯಲ್ಲಿ ನಗರ ವಾಸಿಗಳ ನಿರಾಸಕ್ತಿ’ ವಿಷಯದ ಕುರಿತು ಕಿರುಚಿತ್ರ ಸ್ಪರ್ಧ!

ಮೈಸೂರು: ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ. ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಒಂದು ನಿಮಿಷದೊಳಗಿನ ಕಿರುಚಿತ್ರವನ್ನು ಚಿತ್ರೀಕರಿಸಲು ತೀರ್ಮಾನಿಸಿದೆ.

ಕಳೆದ ಬಾರಿಯ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ರ ಚುನಾವಣೆಯಲ್ಲಿ ಶೇಕಡವಾರು ಮತದಾನ ಪ್ರಮಾಣವು ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ.

ಇದನ್ನು ಮನಗಂಡ ಚುನಾವಣ ಆಯೋಗವು ಮತದಾನ ಪ್ರಕ್ರಿಯೆಯಲ್ಲಿ ನಗರ ವಾಸಿಗಳ ನಿರಾಸಕ್ತಿ’ ವಿಷಯದ ಕುರಿತು ಕಿರುಚಿತ್ರ ಸ್ಪರ್ಧೆ ಏರ್ಪಡಿಸಿದೆ. ಮತದಾರರ ಸಾಕ್ಷರತಾ ಸಂಘಗಳ ಮುಖೇನ ಎಲ್ಲಾ ಸಾರ್ವಜನಿಕರು ಹಾಗು ಕಾಲೇಜುಗಳ ವಿದ್ಯಾರ್ಥಿಗಳು ಮುಕ್ತವಾಗಿ ಭಾಗವಹಿಸಿ, ಜನವರಿ 10 ರೊಳಗಾಗಿ ವಿಡಿಯೋ ಚಿತ್ರೀಕರಿಸಿ ಸಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದೆ. 

ಉತ್ತಮ ಚಿತ್ರಕ್ಕೆ ಬಹುಮಾನ:  ಉತ್ತಮವಾದ ಕಿರುಚಿತ್ರಗಳಿಗೆ ಪ್ರಥಮ ಬಹುಮಾನ-5000/-, ದ್ವಿತೀಯ ಬಹುಮಾನ-3000/-ಹಾಗೂ ತೃತೀಯ ಬಹುಮಾನ2000/- ನೀಡಲಾಗುತ್ತದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಉಪಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

38 mins ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

39 mins ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

40 mins ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

40 mins ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…

42 mins ago

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

4 hours ago