ಜಿಲ್ಲೆಗಳು

’ಮತದಾನ ಪ್ರಕ್ರಿಯೆಯಲ್ಲಿ ನಗರ ವಾಸಿಗಳ ನಿರಾಸಕ್ತಿ’ ವಿಷಯದ ಕುರಿತು ಕಿರುಚಿತ್ರ ಸ್ಪರ್ಧ!

ಮೈಸೂರು: ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ. ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಒಂದು ನಿಮಿಷದೊಳಗಿನ ಕಿರುಚಿತ್ರವನ್ನು ಚಿತ್ರೀಕರಿಸಲು ತೀರ್ಮಾನಿಸಿದೆ.

ಕಳೆದ ಬಾರಿಯ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ರ ಚುನಾವಣೆಯಲ್ಲಿ ಶೇಕಡವಾರು ಮತದಾನ ಪ್ರಮಾಣವು ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ.

ಇದನ್ನು ಮನಗಂಡ ಚುನಾವಣ ಆಯೋಗವು ಮತದಾನ ಪ್ರಕ್ರಿಯೆಯಲ್ಲಿ ನಗರ ವಾಸಿಗಳ ನಿರಾಸಕ್ತಿ’ ವಿಷಯದ ಕುರಿತು ಕಿರುಚಿತ್ರ ಸ್ಪರ್ಧೆ ಏರ್ಪಡಿಸಿದೆ. ಮತದಾರರ ಸಾಕ್ಷರತಾ ಸಂಘಗಳ ಮುಖೇನ ಎಲ್ಲಾ ಸಾರ್ವಜನಿಕರು ಹಾಗು ಕಾಲೇಜುಗಳ ವಿದ್ಯಾರ್ಥಿಗಳು ಮುಕ್ತವಾಗಿ ಭಾಗವಹಿಸಿ, ಜನವರಿ 10 ರೊಳಗಾಗಿ ವಿಡಿಯೋ ಚಿತ್ರೀಕರಿಸಿ ಸಲ್ಲಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದೆ. 

ಉತ್ತಮ ಚಿತ್ರಕ್ಕೆ ಬಹುಮಾನ:  ಉತ್ತಮವಾದ ಕಿರುಚಿತ್ರಗಳಿಗೆ ಪ್ರಥಮ ಬಹುಮಾನ-5000/-, ದ್ವಿತೀಯ ಬಹುಮಾನ-3000/-ಹಾಗೂ ತೃತೀಯ ಬಹುಮಾನ2000/- ನೀಡಲಾಗುತ್ತದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಉಪಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

11 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

11 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

11 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

11 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

11 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

11 hours ago