ಮೈಸೂರು: ಕೆಲಸ ಮಾಡುತ್ತಿದ್ದ ವೇಳೆ ತೀವ್ರ ಆಯಾಸಕ್ಕೆ ಒಳಗಾದ ಲೈನ್ಮನ್ ಒಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ಚಾಮುಂಡಿಪುರಂ ಶಾಖೆಯ ಸರ್ವಿಸ್ ಸ್ಟೇಷನ್ ನೌಕರ, ಕನಕಗಿರಿ ನಿವಾಸಿ ಮಹದೇವ(58) ಮೃತಪಟ್ಟವರು. ಭಾನುವಾರ ಮಧ್ಯಾಹ್ನ 1.30 ರ ಸುಮಾರಿನಲ್ಲಿ ನಗರದ ಮೈಸೂರು – ಮಾನಂದವಾಡಿ ರಸ್ತೆಯ ಸ್ಯಾಂಡಲ್ ಫ್ಯಾಕ್ಟರಿ ಬಳಿ ಇರುವ ಕೆಇಬಿಗೆ ಹೋಗುವ ರಸ್ತೆಯಲ್ಲಿ ಜಂಪ್ ರೀವರ್ಕ್ ನಡೆಯುತ್ತಿತ್ತು. ಈ ವೇಳೆ ಏಣಿಯಲ್ಲಿ ಕೆಲಸ ಮಾಡುತ್ತಿದ್ದ ಮಹದೇವು ಅವರು ತೀವ್ರ ಆಯಾಸಗೊಂಡಿದ್ದಾರೆ. ಇದನ್ನು ಗಮನಿಸಿದ ಕೆಳಗಿದ್ದ ಸಿಬ್ಬಂದಿ ಏಣಿ ಹತ್ತಿ ಅವರನ್ನು ಇಳಿಸಿಕೊಂಡು, ತಕ್ಷಣ ಜೆ.ಪಿ. ನಗರದ ಕಾಮಾಕ್ಷಿ ಆಸ್ಪತ್ರೆಗೆ ದಾಖಲಾಗಿಸಿದ್ದಾರೆ. ಅಲ್ಲಿ ವೈದ್ಯರು ತಪಾಸಣೆ ನಡೆಸಿ, ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ನಗರ ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…