ಮೈಸೂರು: ಕೆಲಸ ಮಾಡುತ್ತಿದ್ದ ವೇಳೆ ತೀವ್ರ ಆಯಾಸಕ್ಕೆ ಒಳಗಾದ ಲೈನ್ಮನ್ ಒಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ಚಾಮುಂಡಿಪುರಂ ಶಾಖೆಯ ಸರ್ವಿಸ್ ಸ್ಟೇಷನ್ ನೌಕರ, ಕನಕಗಿರಿ ನಿವಾಸಿ ಮಹದೇವ(58) ಮೃತಪಟ್ಟವರು. ಭಾನುವಾರ ಮಧ್ಯಾಹ್ನ 1.30 ರ ಸುಮಾರಿನಲ್ಲಿ ನಗರದ ಮೈಸೂರು – ಮಾನಂದವಾಡಿ ರಸ್ತೆಯ ಸ್ಯಾಂಡಲ್ ಫ್ಯಾಕ್ಟರಿ ಬಳಿ ಇರುವ ಕೆಇಬಿಗೆ ಹೋಗುವ ರಸ್ತೆಯಲ್ಲಿ ಜಂಪ್ ರೀವರ್ಕ್ ನಡೆಯುತ್ತಿತ್ತು. ಈ ವೇಳೆ ಏಣಿಯಲ್ಲಿ ಕೆಲಸ ಮಾಡುತ್ತಿದ್ದ ಮಹದೇವು ಅವರು ತೀವ್ರ ಆಯಾಸಗೊಂಡಿದ್ದಾರೆ. ಇದನ್ನು ಗಮನಿಸಿದ ಕೆಳಗಿದ್ದ ಸಿಬ್ಬಂದಿ ಏಣಿ ಹತ್ತಿ ಅವರನ್ನು ಇಳಿಸಿಕೊಂಡು, ತಕ್ಷಣ ಜೆ.ಪಿ. ನಗರದ ಕಾಮಾಕ್ಷಿ ಆಸ್ಪತ್ರೆಗೆ ದಾಖಲಾಗಿಸಿದ್ದಾರೆ. ಅಲ್ಲಿ ವೈದ್ಯರು ತಪಾಸಣೆ ನಡೆಸಿ, ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ನಗರ ಅಶೋಕಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…