Mysore
28
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಸಿದ್ದಲಿಂಗಪುರ ಸುಬ್ರಹ್ಮಣ್ಯೇಶ್ವರ ಸ್ವಾಮಿ ಷಷ್ಠಿ ಮಹೋತ್ಸವ ರದ್ದು

ಮೈಸೂರು: ಮೈಸೂರು ನಗರದ ಹೊರವಲಯದಲ್ಲಿರುವ ಸಿದ್ಧಲಿಂಗಪುರ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಈ ವರ್ಷ ಷಷ್ಠಿ ಮಹೋತ್ಸವ ಆಚರಣೆಯನ್ನು ರದ್ದು ಮಾಡಲಾಗಿದೆ.
ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಪ್ರತಿ‌ವರ್ಷ ವಿಜೃಂಭಣೆಯಿಂದ ಈ ಇತಿಹಾಸ ಪ್ರಸಿದ್ಧ ಷಷ್ಠಿ ಮಹೋತ್ಸವ ಜಾತ್ರೆ ನಡೆಯುತ್ತಿತ್ತು. ಆದರೆ ದೇವಾಲಯದ ಪುನರ್ ನಿರ್ಮಾಣ ಕಾರ್ಯ ಹಿನ್ನೆಲೆ ನವೆಂಬರ್ 29 ರಂದು ನಡೆಯಬೇಕಿದ್ದ ಷಷ್ಠಿ ಮಹೋತ್ಸವವನ್ನು ರದ್ದು ಮಾಡಿ ಮೈಸೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ದೇವಸ್ಥಾನದ ಸಂಪ್ರದಾಯದಂತೆ ದೇಗುಲದ ಒಳಗೆ ಮಾತ್ರ ಷಷ್ಠಿ ಆಚರಣೆ ಮಾಡಲಿದ್ದು, ಸಾರ್ವಜನಿಕರಿಗೆ ಯಾವುದೇ ಪ್ರವೇಶವಿರುವುದಿಲ್ಲ. ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ ನಿಂದಾಗಿ ಷಷ್ಠಿ ಆಚರಣೆ ಆಗಿರಲಿಲ್ಲ. ಈ ವರ್ಷ ರಸ್ತೆ ಅಗಲೀಕರಣ ನೆಪದಲ್ಲಿ ದೇವಸ್ಥಾನ ಸ್ಥಳಾಂತರ, ದೇವಸ್ಥಾನ ಪುನರ್ ನಿರ್ಮಾಣ ಹಿನ್ನೆಲೆಯಲ್ಲಿ ಷಷ್ಠಿ ಮಹೋತ್ಸವನ್ನು ರದ್ದು ಮಾಡಲಾಗಿದೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!