ಅರಿವಳಿಕೆ ಪ್ರಯೋಗ ಮಾಡಿದರೂ ತಪ್ಪಿಸಿಕೊಂಡ ಹುಲಿರಾಯ
ಸಿದ್ದಾಪುರ: ವಿರಾಜಪೇಟೆಯ ಸಿದ್ದಾಪುರದಲ್ಲಿ ಜಾನುವಾರು ಭಕ್ಷಕ ಹುಲಿ ಇಂದು ಸೆರೆ ಕಾರ್ಯಾಚರಣೆಯ ಸಂದರ್ಭದಲ್ಲಿ ಅರಿವಳಿಕೆ ಇಂಜೆಕ್ಷನ್ ಚುಚ್ಚಿಸಿಕೊಂಡರೂ ಓಡಿ ಮತ್ತೆ ಕಾಡು ಸೇರಿದೆ.
ಈ ಭಾಗದಲ್ಲಿ ಈಗಾಗಲೇ ನಾಲ್ಕು ಹಸುಗಳನ್ನು ಬಲಿ ಪಡೆದಿರುವ ಹುಲಿಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ನಾಲ್ಕೈದು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶುಕ್ರವಾರ ಹುಲಿ ಬಾಡಗ ಬಾಣಂಗಾಲ ಗ್ರಾಮದ ಘಟ್ಟಗಳ ಸಮೀಪ ಹುಲಿಯು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖಾಧಿಕಾರಿಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದರು. ನಾಲ್ಕು ಸಾಕಾನೆಗಳ ನೆರವಿನಿಂದ ಅರಣ್ಯ ಸಿಬ್ಬಂದಿಗಳು ಸೇರಿ ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಹುಲಿಯು ಪತ್ತೆಯಾಯಿತು. ಕೂಡಲೇ ವನ್ಯ ಜೀವಿ ವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಹಾಗೂ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಹಾಗೂ ಶೂಟರ್ ಕನ್ನಂಡ ರಂಜನ್ ಸೇರಿ ಹುಲಿ ಮೇಲೆ ಅರಿವಳಿಕೆ ಚುಚ್ಚುಮದ್ದನ್ನು ಪ್ರಯೋಗಿಸಿದರು. ಆದರೆ ಚುಚ್ಚು ಮದ್ದಿನ ಪ್ರಭಾವಕ್ಕೆ ಒಳಗಾಗಿ ಪ್ರಜ್ಞೆ ತಪ್ಪಿ ಬೀಳದೆ ಹುಲಿಯು ತಪ್ಪಿಸಿಕೊಂಡು ಮುಖ್ಯ ರಸ್ತೆಯ ಮೂಲಕ ಸಾಗಿ ಸಮೀಪದ ಮಾಲ್ದಾರೆ ವ್ಯಾಪ್ತಿಯ ಅರಣ್ಯ ಪ್ರದೇಶ ಸೇರಿಕೊಂಡಿದೆ.
ಕಳೆದ ನಾಲ್ಕು ದಿನಗಳಿಂದ ಕಾರ್ಯಾಚರಣೆ ತಂಡವು ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ಹಾಗೂ ಮೊಳಗುಮನೆ ಸೇರಿದಂತೆ ಸುತ್ತಮುತ್ತಲಿನ ಕಾಫಿ ತೋಟದೊಳಗೆ ಅರಣ್ಯ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಆರ್.ಆರ್.ಟಿ ತಂಡದ ಸಿಬ್ಬಂದಿಗಳು ಸೇರಿ ಹಗಲಿರುಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ ಘಟ್ಟದಳ ಸರ್ಕಾರಿ ತಮಿಳು ಶಾಲೆಯ ಸಮೀಪದಲ್ಲಿ ಬುಧವಾರ ಹುಲಿಯು ಹಾಡಹಗಲೇ ಸಾರ್ವಜನಿಕರ ಎದುರು ಕಾಣಿಸಿಕೊಂಡು ಹಸುವೊಂದನ್ನು ಸಾಯಿಸಿತ್ತು. ಇದರಿಂದಾಗಿ ಗ್ರಾಮಸ್ಥರು ಇನ್ನಷ್ಟು ಭಯಭೀತರಾಗಿದ್ದರು.
ಹುಲಿಯನ್ನು ಪತ್ತೆ ಹಚ್ಚುವಲ್ಲಿ ಕಾರ್ಯಾಚರಣೆ ತಂಡ ಯಶಸ್ವಿಯಾದರೂ ಕೂಡ ಹುಲಿ ಸೆರೆಯಾಗದಿರುವುದು ಸಮಸ್ಯೆಯಾಗಿದೆ. ಆದರೂ ಕೂಡ ಛಲ ಬಿಡದ ಕಾರ್ಯಾಚರಣೆ ತಂಡವು ಹುಲಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಅರಣ್ಯ ಇಲಾಖಾ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಆರ್.ಆರ್.ಟಿ ತಂಡದ ಸಿಬ್ಬಂದಿಗಳು ಸೇರಿ ಕಾರ್ಯಾಚರಣೆಯಲ್ಲಿ 50ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದಾರೆ. ವೀರಾಜಪೇಟೆ ತಾಲೂಕು ಡಿ.ಸಿ.ಎಫ್ ಶಿವರಾಂ ಬಾಬು, ಎ.ಸಿ.ಎಫ್ ನೆಹರೂ ಹಾಗೂ ತಿತಿಮತಿ ವಲಯ ಅರಣ್ಯಾಧಿಕಾರಿ ಅಶೋಕ್ ಹುನಗುಂದ, ಸಿದ್ದಾಪುರ ಠಾಣಾಧಿಕಾರಿ ಮೋಹನ್ರಾಜ್ ಹಾಗೂ ಇನ್ನಿತರರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…